‘ಅಪಾಯದಿಂದ ಪಾರಾಗುವ ವೇಳೆ ಯಾದಗಿರಿ ಜಿಲ್ಲೆಯ ಹುಣಸಗಿಯ ಪ್ರಸಾದ್,ಕೆಂಭಾವಿಯ ಅಯೂಬಿ, ವಿಜಯಪುರ ಜಿಲ್ಲೆ ತಾಳಿಕೋಟೆಯ ತೌಸಿಫ್, ಮೆಹಬೂಬ್, ಶಬ್ಬೀರ್ ಮತ್ತು ದಿಲೀಪ್ ಎಂಬುವರು ಗಾಯಗೊಂಡಿದ್ದಾರೆ. ನೀಲಮ್ಮ ಅವರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಡಿವೈಎಸ್ಪಿ ತಿಪ್ಪೇಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.