<p>ತುಮಕೂರು: ಜಿಲ್ಲೆಯಲ್ಲಿ ಜಾತಿವಾರು ಸಮೀಕ್ಷೆ ಶೇ 70ರಷ್ಟು ಪೂರ್ಣಗೊಂಡಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜಿ.ಎನ್.ಶ್ರೀಕಂಠಯ್ಯ ಹೇಳಿದರು.</p>.<p>ನಗರದ ಯಲ್ಲಾಪುರ, ಅಂತರಸನಹಳ್ಳಿಯಲ್ಲಿ ನಡೆಯುತ್ತಿರುವ ಸಮೀಕ್ಷಾ ಕಾರ್ಯದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು 7,55,483 ಮನೆಗಳಿದ್ದು, ಈಗಾಗಲೇ 5,23,091 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಮನೆಗಳ ಸಮೀಕ್ಷೆ ಕಾರ್ಯವನ್ನು ಅ. 7ರ ಒಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.</p>.<p>ಸಮೀಕ್ಷೆ ವೇಳೆ ಸಣ್ಣಪುಟ್ಟ ಅಡೆತಡೆಗಳು ಎದುರಾದರೂ ಅಧಿಕಾರಿಗಳು ಹಾಗೂ ಸಮೀಕ್ಷೆದಾರರು ಅದನ್ನು ಸಮರ್ಥವಾಗಿ ಎದುರಿಸಿ ಸಮೀಕ್ಷೆ ಮುನ್ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ತಲುಪುತ್ತಿವೆಯೇ? ಇಲ್ಲವೆ? ಎಂಬುದನ್ನು ತಿಳಿಯಲು ಈ ಸಮೀಕ್ಷಾ ಕಾರ್ಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಸಮೀಕ್ಷೆಯ ಸಮಗ್ರ ದತ್ತಾಂಶ ಮುಂದಿನ 20 ವರ್ಷಗಳಿಂದ 30 ವರ್ಷಗಳ ವರೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನೆರವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಣ್ಣ ಆಶಾಪುರ್, ಇತರ ಅಧಿಕಾರಿಗಳು<br>ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲೆಯಲ್ಲಿ ಜಾತಿವಾರು ಸಮೀಕ್ಷೆ ಶೇ 70ರಷ್ಟು ಪೂರ್ಣಗೊಂಡಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜಿ.ಎನ್.ಶ್ರೀಕಂಠಯ್ಯ ಹೇಳಿದರು.</p>.<p>ನಗರದ ಯಲ್ಲಾಪುರ, ಅಂತರಸನಹಳ್ಳಿಯಲ್ಲಿ ನಡೆಯುತ್ತಿರುವ ಸಮೀಕ್ಷಾ ಕಾರ್ಯದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು 7,55,483 ಮನೆಗಳಿದ್ದು, ಈಗಾಗಲೇ 5,23,091 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಮನೆಗಳ ಸಮೀಕ್ಷೆ ಕಾರ್ಯವನ್ನು ಅ. 7ರ ಒಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.</p>.<p>ಸಮೀಕ್ಷೆ ವೇಳೆ ಸಣ್ಣಪುಟ್ಟ ಅಡೆತಡೆಗಳು ಎದುರಾದರೂ ಅಧಿಕಾರಿಗಳು ಹಾಗೂ ಸಮೀಕ್ಷೆದಾರರು ಅದನ್ನು ಸಮರ್ಥವಾಗಿ ಎದುರಿಸಿ ಸಮೀಕ್ಷೆ ಮುನ್ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ತಲುಪುತ್ತಿವೆಯೇ? ಇಲ್ಲವೆ? ಎಂಬುದನ್ನು ತಿಳಿಯಲು ಈ ಸಮೀಕ್ಷಾ ಕಾರ್ಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಸಮೀಕ್ಷೆಯ ಸಮಗ್ರ ದತ್ತಾಂಶ ಮುಂದಿನ 20 ವರ್ಷಗಳಿಂದ 30 ವರ್ಷಗಳ ವರೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನೆರವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಣ್ಣ ಆಶಾಪುರ್, ಇತರ ಅಧಿಕಾರಿಗಳು<br>ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>