<p><strong>ತುಮಕೂರು:</strong> ಕೀಡಾಕೂಟದಲ್ಲೂ ಮೋಸದಾಟ ಮುಂದುವರೆದಿದ್ದರೂ, ಎಲ್ಲರೂ ನೋಡಿಕೊಂಡು ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಕುಳಿತಿದ್ದಾರೆ. ಅನರ್ಹರಿಗೆ ಪ್ರಶಸ್ತಿ ಪಟ್ಟ ಕಟ್ಟಲಾಗುತ್ತಿದೆ. ಕ್ರೀಡಾ ಕ್ಷೇತ್ರಕ್ಕೂ ವಂಚನೆ ಕಾಲಿಟ್ಟಿರುವುದು ಕ್ರೀಡಾ ಪ್ರೇಮಿಗಳನ್ನು ಆತಂಕಕ್ಕೆ ದೂಡಿದೆ.</p>.<p>ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅನರ್ಹರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈಗ ನಗರದಲ್ಲಿ ನಡೆಯುತ್ತಿರುವ ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಅಂತಹುದೇ ಎಡವಟ್ಟು ಮಾಡಲಾಗಿದೆ. ಇದೇನು ಗೊತ್ತಿದ್ದೂ ನಡೆಯುತ್ತಿದೆಯೇ? ಎಂಬ ಅನುಮಾನ ಹುಟ್ಟು ಹಾಕಿದೆ.</p>.<p>ಜಿಲ್ಲಾ ಹಾಗೂ ಬೆಂಗಳೂರು ವಿಭಾಗ ಮಟ್ಟದಲ್ಲಿ ನಡೆದ 1,500 ಮೀಟರ್, 5 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸದೇ ಇರುವ ಕ್ರೀಡಾಪಟುಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಪುರುಷರ ವಿಭಾಗದಲ್ಲಿ ರಘುವೀರ್ 1,500 ಮೀಟರ್ ಓಟದಲ್ಲಿ ದ್ವಿತೀಯ ಮತ್ತು 5 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶದ ಪಟ್ಟಿಯಲ್ಲಿ ಇವರ ಹೆಸರೇ ಕಾಣೆಯಾಗಿದೆ. ಇವರ ಬದಲಾಗಿ ಕ್ರಮವಾಗಿ ಎಚ್.ವಿ.ದರ್ಶನ್ ಮತ್ತು ಚಿರೇಶ್ಗೌಡ ಹೆಸರು ಸೇರಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸದವರ ಹೆಸರನ್ನು ವಿಜೇತರ ಪಟ್ಟಿಯಲ್ಲಿ ಸೇರಿಸಿ ಚಮತ್ಕಾರ ಮೆರೆದಿದ್ದಾರೆ!</p>.<p>ಜಿಲ್ಲಾ ಮಟ್ಟದಲ್ಲೂ: ಗುರುಪ್ರಸಾದ್ ಜಿಲ್ಲಾ ಮಟ್ಟದ ಕ್ರೀಡಾಕೂಟದ 1,500 ಮೀಟರ್, 5 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಮತ್ತೊಬ್ಬ ಕ್ರೀಡಾಪಟು ಟಿ.ಎಸ್.ಸಂದೀಪ್ 5 ಸಾವಿರ ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಈ ಇಬ್ಬರು ತಾಲ್ಲೂಕು ಮಟ್ಟದ ಟೂರ್ನಿಯಲ್ಲಿ ಭಾಗವಹಿಸಿರಲಿಲ್ಲ. ನೇರವಾಗಿ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವ ಮೂಲಕ ಸಂಘಟಕರು ಎಡವಟ್ಟು ಮಾಡಿದ್ದರು. ನಂತರ ಸರಿಪಡಿಸಿದ್ದರು.</p>.<p>ಅವ್ಯವಸ್ಥೆ: ಕ್ರೀಡಾಕೂಟದಲ್ಲಿನ ಅವ್ಯವಸ್ಥೆ ಹೇಳತೀರದಾಗಿದೆ. ಕ್ರೀಡಾಕೂಟ ನಡೆಸಲು ಸಾಕಷ್ಟು ಅನುದಾನ ಬಿಡುಗಡೆಯಾಗುತ್ತದೆ. ಆದರೆ ಇಲ್ಲಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಜಿಲ್ಲಾ ಕ್ರೀಡಾಂಗಣದಲ್ಲಿ ಶೌಚಾಲಯ ಸ್ವಚ್ಛವಾಗಿಲ್ಲ. ಊಟದ ವ್ಯವಸ್ಥೆಯೂ ಸರಿಯಾಗಿಲ್ಲ. ಚಿತ್ರಾನ್ನ, ಪುಲಾವ್ ಕೊಟ್ಟು ಸುಮ್ಮನಾಗುತ್ತಾರೆ ಎಂದು ಕ್ರೀಡಾಪಟುಗಳು ದೂರಿದರು.</p>.<p>‘ವಿವಿಧ ಕ್ರೀಡೆಗಳನ್ನು ನಡೆಸಲು ಬೇಕಾದ ತರಬೇತುದಾರರೇ ಇಲ್ಲ. ಕ್ರೀಡಾಂಗಣ ಚೆನ್ನಾಗಿದೆ ಎಂಬುದನ್ನು ಬಿಟ್ಟರೆ ಬೇರೆ ಯಾವುದೇ ಸೌಲಭ್ಯ ಇಲ್ಲ. ವಿಭಾಗೀಯ ಮಟ್ಟದ ಕ್ರೀಡಾಕೂಟ ನಡೆಸಲು ಅಗತ್ಯ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ’ ಎಂದು ಕ್ರೀಡಾಕೂಟದಲ್ಲಿ ಭಾಗವಹಿಸಿದವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಂದು ಕ್ರೀಡಾಕೂಟ ನಡೆಸಲು ಆಗದಿದ್ದರೆ ಹೇಗೆ? ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಜಿಲ್ಲಾ ಮಟ್ಟದ ಕ್ರೀಡಾಕೂಟದ ವೇಳೆಯೂ ಇದೇ ರೀತಿಯಾಗಿತ್ತು. ಇನ್ನು ಸರಿ ಹೋಗಿಲ್ಲ. ಅನರ್ಹರನ್ನು ಆಯ್ಕೆ ಮಾಡುವ ಪ್ರವೃತ್ತಿ ಕೊನೆಗಾಣಬೇಕು’ ಎಂದು ಕ್ರೀಡಾಪಟುವೊಬ್ಬರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೀಡಾಕೂಟದಲ್ಲೂ ಮೋಸದಾಟ ಮುಂದುವರೆದಿದ್ದರೂ, ಎಲ್ಲರೂ ನೋಡಿಕೊಂಡು ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಕುಳಿತಿದ್ದಾರೆ. ಅನರ್ಹರಿಗೆ ಪ್ರಶಸ್ತಿ ಪಟ್ಟ ಕಟ್ಟಲಾಗುತ್ತಿದೆ. ಕ್ರೀಡಾ ಕ್ಷೇತ್ರಕ್ಕೂ ವಂಚನೆ ಕಾಲಿಟ್ಟಿರುವುದು ಕ್ರೀಡಾ ಪ್ರೇಮಿಗಳನ್ನು ಆತಂಕಕ್ಕೆ ದೂಡಿದೆ.</p>.<p>ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅನರ್ಹರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈಗ ನಗರದಲ್ಲಿ ನಡೆಯುತ್ತಿರುವ ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಅಂತಹುದೇ ಎಡವಟ್ಟು ಮಾಡಲಾಗಿದೆ. ಇದೇನು ಗೊತ್ತಿದ್ದೂ ನಡೆಯುತ್ತಿದೆಯೇ? ಎಂಬ ಅನುಮಾನ ಹುಟ್ಟು ಹಾಕಿದೆ.</p>.<p>ಜಿಲ್ಲಾ ಹಾಗೂ ಬೆಂಗಳೂರು ವಿಭಾಗ ಮಟ್ಟದಲ್ಲಿ ನಡೆದ 1,500 ಮೀಟರ್, 5 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸದೇ ಇರುವ ಕ್ರೀಡಾಪಟುಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಪುರುಷರ ವಿಭಾಗದಲ್ಲಿ ರಘುವೀರ್ 1,500 ಮೀಟರ್ ಓಟದಲ್ಲಿ ದ್ವಿತೀಯ ಮತ್ತು 5 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶದ ಪಟ್ಟಿಯಲ್ಲಿ ಇವರ ಹೆಸರೇ ಕಾಣೆಯಾಗಿದೆ. ಇವರ ಬದಲಾಗಿ ಕ್ರಮವಾಗಿ ಎಚ್.ವಿ.ದರ್ಶನ್ ಮತ್ತು ಚಿರೇಶ್ಗೌಡ ಹೆಸರು ಸೇರಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸದವರ ಹೆಸರನ್ನು ವಿಜೇತರ ಪಟ್ಟಿಯಲ್ಲಿ ಸೇರಿಸಿ ಚಮತ್ಕಾರ ಮೆರೆದಿದ್ದಾರೆ!</p>.<p>ಜಿಲ್ಲಾ ಮಟ್ಟದಲ್ಲೂ: ಗುರುಪ್ರಸಾದ್ ಜಿಲ್ಲಾ ಮಟ್ಟದ ಕ್ರೀಡಾಕೂಟದ 1,500 ಮೀಟರ್, 5 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಮತ್ತೊಬ್ಬ ಕ್ರೀಡಾಪಟು ಟಿ.ಎಸ್.ಸಂದೀಪ್ 5 ಸಾವಿರ ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಈ ಇಬ್ಬರು ತಾಲ್ಲೂಕು ಮಟ್ಟದ ಟೂರ್ನಿಯಲ್ಲಿ ಭಾಗವಹಿಸಿರಲಿಲ್ಲ. ನೇರವಾಗಿ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವ ಮೂಲಕ ಸಂಘಟಕರು ಎಡವಟ್ಟು ಮಾಡಿದ್ದರು. ನಂತರ ಸರಿಪಡಿಸಿದ್ದರು.</p>.<p>ಅವ್ಯವಸ್ಥೆ: ಕ್ರೀಡಾಕೂಟದಲ್ಲಿನ ಅವ್ಯವಸ್ಥೆ ಹೇಳತೀರದಾಗಿದೆ. ಕ್ರೀಡಾಕೂಟ ನಡೆಸಲು ಸಾಕಷ್ಟು ಅನುದಾನ ಬಿಡುಗಡೆಯಾಗುತ್ತದೆ. ಆದರೆ ಇಲ್ಲಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಜಿಲ್ಲಾ ಕ್ರೀಡಾಂಗಣದಲ್ಲಿ ಶೌಚಾಲಯ ಸ್ವಚ್ಛವಾಗಿಲ್ಲ. ಊಟದ ವ್ಯವಸ್ಥೆಯೂ ಸರಿಯಾಗಿಲ್ಲ. ಚಿತ್ರಾನ್ನ, ಪುಲಾವ್ ಕೊಟ್ಟು ಸುಮ್ಮನಾಗುತ್ತಾರೆ ಎಂದು ಕ್ರೀಡಾಪಟುಗಳು ದೂರಿದರು.</p>.<p>‘ವಿವಿಧ ಕ್ರೀಡೆಗಳನ್ನು ನಡೆಸಲು ಬೇಕಾದ ತರಬೇತುದಾರರೇ ಇಲ್ಲ. ಕ್ರೀಡಾಂಗಣ ಚೆನ್ನಾಗಿದೆ ಎಂಬುದನ್ನು ಬಿಟ್ಟರೆ ಬೇರೆ ಯಾವುದೇ ಸೌಲಭ್ಯ ಇಲ್ಲ. ವಿಭಾಗೀಯ ಮಟ್ಟದ ಕ್ರೀಡಾಕೂಟ ನಡೆಸಲು ಅಗತ್ಯ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ’ ಎಂದು ಕ್ರೀಡಾಕೂಟದಲ್ಲಿ ಭಾಗವಹಿಸಿದವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಂದು ಕ್ರೀಡಾಕೂಟ ನಡೆಸಲು ಆಗದಿದ್ದರೆ ಹೇಗೆ? ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಜಿಲ್ಲಾ ಮಟ್ಟದ ಕ್ರೀಡಾಕೂಟದ ವೇಳೆಯೂ ಇದೇ ರೀತಿಯಾಗಿತ್ತು. ಇನ್ನು ಸರಿ ಹೋಗಿಲ್ಲ. ಅನರ್ಹರನ್ನು ಆಯ್ಕೆ ಮಾಡುವ ಪ್ರವೃತ್ತಿ ಕೊನೆಗಾಣಬೇಕು’ ಎಂದು ಕ್ರೀಡಾಪಟುವೊಬ್ಬರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>