<p><strong>ತುಮಕೂರು:</strong> ‘ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕೊರೊನಾ ಭಯ ಕಡಿಮೆಯಾಗಿದೆ. ಈ ಭಯವನ್ನೇ ಅಸ್ತ್ರ ಮಾಡಿಕೊಂಡು ಅಧಿಕಾರಿಗಳು, ರಾಜಕಾರಣಿಗಳು ಹಣಮಾಡುವ ದಂಧೆ ಮಾಡಿಕೊಂಡಿದ್ದಾರೆ ಎಂಬ ತಪ್ಪು ಅಭಿಪ್ರಾಯ ಮೂಡಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಅಸೋಸಿಯೇಷನ್, ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್, ಸರ್ಕಾರಿ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರ ಸಂಘ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಪ್ರಯೋಗಾಲಯ ತಂತ್ರಜ್ಞರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕರಲ್ಲಿ ಮೂಡಿರುವ ತಪ್ಪು ಅಭಿಪ್ರಾಯ ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಕೊರೊನಾ ತಡೆಗಟ್ಟುವಲ್ಲಿ ತೊಡಗಿಸಿಕೊಂಡಿರುವ ವಾರಿಯರ್ಸ್ಗಳು ಜಾಗೃತಿ ಮೂಡಿಸಬೇಕಿದೆ. ಇದೊಂದು ಭಯಾನಕ ಕಾಯಿಲೆ ಎಂಬುದು ಮನದಟ್ಟಾಗಬೇಕಿದೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಪ್ರಯೋಗಾಲಯ ತಂತ್ರಜ್ಞರ ಪಾತ್ರ ಬಹಳ ಮಹತ್ವದ್ದು. ಅವರ ಸೇವೆಯನ್ನು ಮರೆಯುವಂತಿಲ್ಲ ಎಂದು ಹೇಳಿದರು.</p>.<p>ಸೋಂಕು ಕಾಣಿಸಿಕೊಂಡ ಆರಂಭದಲ್ಲಿ ಆತಂಕ ಇತ್ತು. ತಂತ್ರಜ್ಞರ ಅಭಯ ಸಿಕ್ಕ ನಂತರ ಪ್ರಯೋಗಾಲಯಗಳನ್ನು ವಿಸ್ತರಿಸಿ, ಇಲ್ಲಿಯೇ ಗಂಟಲು ದ್ರವ ತೆಗೆದು ಪರೀಕ್ಷೆಗೆ ಒಳಪಡಿಸಲಾಯಿತು. ಪ್ರಸ್ತುತ ತಿಪಟೂರಿನಲ್ಲೂ ಪ್ರಯೋಗಾಲಯ ತೆರೆದು ಕೊರೊನಾ ಸೋಂಕು ಪರೀಕ್ಷಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ‘ಆರಂಭದಲ್ಲಿ ಕೋವಿಡ್ ಎದುರಿಸಲು ದೇಶ ಸಜ್ಜಾಗಿರಲಿಲ್ಲ. ಹಂತ ಹಂತವಾಗಿ ತಡೆಗಟ್ಟುವ ಸಾಮರ್ಥ್ಯ ಬೆಳೆಸಿಕೊಳ್ಳಲಾಯಿತು. ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆ ರೇಡ್ ಜೋನ್ಗೆ ಹೋಗುವುದನ್ನು ತಡೆಯಲು ಸಾಧ್ಯವಾಯಿತು’ ಎಂದು ಹೇಳಿದರು.</p>.<p>ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಗೆ ವಾರಕ್ಕೆ ಒಂದು ದಿನ ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ತುರ್ತು ಸೇವೆ ಎಂದು ಪರಿಗಣಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಸಂಘದ ಅಧ್ಯಕ್ಷ ಬೆಳ್ಳಿ ಲೋಕೇಶ್, ತಂತ್ರಜ್ಞರ ಸಂಘಟನೆಗಳ ಪದಾಧಿಕಾರಿಗಳಾದ ವೆಂಕಟಸ್ವಾಮಿ, ನಾರಾಯಣಸ್ವಾಮಿ, ಪದ್ಮಣ್ಣ, ನಾಗರಾಜು, ದ್ಯಾಮಣ್ಣ, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕೊರೊನಾ ಭಯ ಕಡಿಮೆಯಾಗಿದೆ. ಈ ಭಯವನ್ನೇ ಅಸ್ತ್ರ ಮಾಡಿಕೊಂಡು ಅಧಿಕಾರಿಗಳು, ರಾಜಕಾರಣಿಗಳು ಹಣಮಾಡುವ ದಂಧೆ ಮಾಡಿಕೊಂಡಿದ್ದಾರೆ ಎಂಬ ತಪ್ಪು ಅಭಿಪ್ರಾಯ ಮೂಡಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಸ್ಟ್ ಅಸೋಸಿಯೇಷನ್, ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್, ಸರ್ಕಾರಿ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರ ಸಂಘ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಪ್ರಯೋಗಾಲಯ ತಂತ್ರಜ್ಞರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕರಲ್ಲಿ ಮೂಡಿರುವ ತಪ್ಪು ಅಭಿಪ್ರಾಯ ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಕೊರೊನಾ ತಡೆಗಟ್ಟುವಲ್ಲಿ ತೊಡಗಿಸಿಕೊಂಡಿರುವ ವಾರಿಯರ್ಸ್ಗಳು ಜಾಗೃತಿ ಮೂಡಿಸಬೇಕಿದೆ. ಇದೊಂದು ಭಯಾನಕ ಕಾಯಿಲೆ ಎಂಬುದು ಮನದಟ್ಟಾಗಬೇಕಿದೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಪ್ರಯೋಗಾಲಯ ತಂತ್ರಜ್ಞರ ಪಾತ್ರ ಬಹಳ ಮಹತ್ವದ್ದು. ಅವರ ಸೇವೆಯನ್ನು ಮರೆಯುವಂತಿಲ್ಲ ಎಂದು ಹೇಳಿದರು.</p>.<p>ಸೋಂಕು ಕಾಣಿಸಿಕೊಂಡ ಆರಂಭದಲ್ಲಿ ಆತಂಕ ಇತ್ತು. ತಂತ್ರಜ್ಞರ ಅಭಯ ಸಿಕ್ಕ ನಂತರ ಪ್ರಯೋಗಾಲಯಗಳನ್ನು ವಿಸ್ತರಿಸಿ, ಇಲ್ಲಿಯೇ ಗಂಟಲು ದ್ರವ ತೆಗೆದು ಪರೀಕ್ಷೆಗೆ ಒಳಪಡಿಸಲಾಯಿತು. ಪ್ರಸ್ತುತ ತಿಪಟೂರಿನಲ್ಲೂ ಪ್ರಯೋಗಾಲಯ ತೆರೆದು ಕೊರೊನಾ ಸೋಂಕು ಪರೀಕ್ಷಿಸಲಾಗುತ್ತಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ‘ಆರಂಭದಲ್ಲಿ ಕೋವಿಡ್ ಎದುರಿಸಲು ದೇಶ ಸಜ್ಜಾಗಿರಲಿಲ್ಲ. ಹಂತ ಹಂತವಾಗಿ ತಡೆಗಟ್ಟುವ ಸಾಮರ್ಥ್ಯ ಬೆಳೆಸಿಕೊಳ್ಳಲಾಯಿತು. ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆ ರೇಡ್ ಜೋನ್ಗೆ ಹೋಗುವುದನ್ನು ತಡೆಯಲು ಸಾಧ್ಯವಾಯಿತು’ ಎಂದು ಹೇಳಿದರು.</p>.<p>ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಗೆ ವಾರಕ್ಕೆ ಒಂದು ದಿನ ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ತುರ್ತು ಸೇವೆ ಎಂದು ಪರಿಗಣಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಸಂಘದ ಅಧ್ಯಕ್ಷ ಬೆಳ್ಳಿ ಲೋಕೇಶ್, ತಂತ್ರಜ್ಞರ ಸಂಘಟನೆಗಳ ಪದಾಧಿಕಾರಿಗಳಾದ ವೆಂಕಟಸ್ವಾಮಿ, ನಾರಾಯಣಸ್ವಾಮಿ, ಪದ್ಮಣ್ಣ, ನಾಗರಾಜು, ದ್ಯಾಮಣ್ಣ, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>