ತುಮಕೂರು: ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.
ಆರು ವರ್ಷಗಳ ಕಾಲ ಪರಿಶಿಷ್ಟ ಜಾತಿಯ ಆರ್.ರಾಮಕೃಷ್ಣ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಈಗ ಹಿಂದುಳಿದ ಕಾಡುಗೊಲ್ಲ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ವರಿಷ್ಠರು ಒತ್ತು ನೀಡಿದ್ದಾರೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕ (ಒಬಿಸಿ) ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಸೆನೆಟ್ ಸದಸ್ಯ, ಕೆಎಂಎಫ್ ನಿರ್ದೇಶಕ, ಮಧುಗಿರಿ ತಾಲ್ಲೂಕು ಭೂ ಮಂಜೂರಾತಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವಹೊಂದಿದ್ದಾರೆ.