<p><strong>ತುಮಕೂರು</strong>: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿ ಸೋಮವಾರ ಬೆಸ್ಕಾಂ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾ ಏರ್ಪಡಿಸಲಾಗಿತ್ತು.</p>.<p>ಬೆಸ್ಕಾಂ ಸೂಪರಿಂಟೆಂಡಿಂಗ್ ಎಂಜಿನಿಯರ್ ನರಸಿಂಹಮೂರ್ತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾರ್ವಜನಿಕರಿಗೆ ಅರಿವಿಲ್ಲದೆ ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಇದನ್ನು ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಬೇಕು. ವಿದ್ಯುತ್ ಅವಘಡಗಳಿಗೆ ಸಂಬಂಧಿಸಿದಂತೆ ದೂರು, ಕರೆಗಳು ಬಂದರೆ ತುರ್ತಾಗಿ ಸೇವೆ ಒದಗಿಸಲಾಗುವುದು’ ಎಂದರು.</p>.<p>ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ‘ಲೈನ್ಮ್ಯಾನ್ಗಳು ಸಾರ್ವಜನಿಕರ ಜತೆಗೆ ಹೆಚ್ಚಿನ ಸಂಪರ್ಕ ಹೊಂದಿರುತ್ತಾರೆ. ಜನರಿಗೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಬೆಸ್ಕಾಂ ಉಪವಿದ್ಯುತ್ ಪರಿವೀಕ್ಷಕಿ ಹಸೀನಾ ಭಾನು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಪುರುಷೋತ್ತಮ, ಮೆಹಬೂಬ್ ಶರೀಫ್, ಗುರುರಾಜ್, ಬಿ.ಎಸ್.ವೆಂಕಟೇಶ್, ಮಲ್ಲಣ್ಣ, ಶೈಲೇಂದ್ರ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿ ಸೋಮವಾರ ಬೆಸ್ಕಾಂ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾ ಏರ್ಪಡಿಸಲಾಗಿತ್ತು.</p>.<p>ಬೆಸ್ಕಾಂ ಸೂಪರಿಂಟೆಂಡಿಂಗ್ ಎಂಜಿನಿಯರ್ ನರಸಿಂಹಮೂರ್ತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾರ್ವಜನಿಕರಿಗೆ ಅರಿವಿಲ್ಲದೆ ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಇದನ್ನು ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಬೇಕು. ವಿದ್ಯುತ್ ಅವಘಡಗಳಿಗೆ ಸಂಬಂಧಿಸಿದಂತೆ ದೂರು, ಕರೆಗಳು ಬಂದರೆ ತುರ್ತಾಗಿ ಸೇವೆ ಒದಗಿಸಲಾಗುವುದು’ ಎಂದರು.</p>.<p>ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ‘ಲೈನ್ಮ್ಯಾನ್ಗಳು ಸಾರ್ವಜನಿಕರ ಜತೆಗೆ ಹೆಚ್ಚಿನ ಸಂಪರ್ಕ ಹೊಂದಿರುತ್ತಾರೆ. ಜನರಿಗೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಬೆಸ್ಕಾಂ ಉಪವಿದ್ಯುತ್ ಪರಿವೀಕ್ಷಕಿ ಹಸೀನಾ ಭಾನು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಪುರುಷೋತ್ತಮ, ಮೆಹಬೂಬ್ ಶರೀಫ್, ಗುರುರಾಜ್, ಬಿ.ಎಸ್.ವೆಂಕಟೇಶ್, ಮಲ್ಲಣ್ಣ, ಶೈಲೇಂದ್ರ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>