ಮಂಗಳವಾರ ‘ಪ್ರಜಾವಾಣಿ’ಯಲ್ಲಿ ‘ಬಿಳೇಕಲ್ಲಹಳ್ಳಿ, ಭಕ್ತರಹಳ್ಳಿ ನೊಣಗಳ ಕಾಟ’ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಇತರೆ ಕಾರ್ಯಗಳ ಬಗ್ಗೆ ಪರಿಶೀಲಿಸಿದರು. ಜೊತೆಗೆ ಗ್ರಾಮದ ಕೂಗಳತೆ ದೂರದಲ್ಲಿನ ಕೋಳಿ ಫಾರಂಗೆ ಭೇಟಿ ನೀಡಿ ಮಾಲೀಕರೊಂದಿಗೆ ಚರ್ಚೆ ನಡೆಸಿದರು.