<p><strong>ತುಮಕೂರು</strong>: ತೆಂಗು ಅಭಿವೃದ್ಧಿ ಮಂಡಳಿಯು ‘ಕೇರಾ ಸುರಕ್ಷಾ ವಿಮಾ ಯೋಜನೆ’ ಜಾರಿ ಮಾಡಿದ್ದು, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ ನೆರವಾಗಲಿದೆ.</p>.<p>ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಕಾಯಿ, ಎಳನೀರು ಕೊಯ್ಲು ಮಾಡುವ ಗೊನೆಗಾರರ ಸುರಕ್ಷತಾ ದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಗೊನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ವಿಮೆ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.</p>.<p>ಮರದಿಂದ ಕಾಯಿ ಕೀಳುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟರೆ ₹7 ಲಕ್ಷ, ಅಂಗವಿಕಲರಾದರೆ ₹3.50 ಲಕ್ಷ, ಆಸ್ಪತ್ರೆ ವೆಚ್ಚ ₹2 ಲಕ್ಷ ಪರಿಹಾರ ನೀಡಲಾಗುತ್ತದೆ. ವಿಮೆ ಪಡೆಯಲು ವಾರ್ಷಿಕ ₹956 ಪಾವತಿಸಬೇಕಿದ್ದು, ಅದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯು ₹717 ನೀಡಿದರೆ ರೈತರು ₹239 ಪಾವತಿಸಬೇಕಿದೆ.</p>.<p>ಜಿಲ್ಲೆಯಲ್ಲಿ 2,24,507 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದು, ರೈತರು ವಿಮೆ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಾಲ ತಾಣ www.coconut.board.gov.in/ ಅಥವಾ ತೋಟಗಾರಿಕೆ ಇಲಾಖೆ ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತೆಂಗು ಅಭಿವೃದ್ಧಿ ಮಂಡಳಿಯು ‘ಕೇರಾ ಸುರಕ್ಷಾ ವಿಮಾ ಯೋಜನೆ’ ಜಾರಿ ಮಾಡಿದ್ದು, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ ನೆರವಾಗಲಿದೆ.</p>.<p>ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಕಾಯಿ, ಎಳನೀರು ಕೊಯ್ಲು ಮಾಡುವ ಗೊನೆಗಾರರ ಸುರಕ್ಷತಾ ದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಗೊನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ವಿಮೆ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.</p>.<p>ಮರದಿಂದ ಕಾಯಿ ಕೀಳುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟರೆ ₹7 ಲಕ್ಷ, ಅಂಗವಿಕಲರಾದರೆ ₹3.50 ಲಕ್ಷ, ಆಸ್ಪತ್ರೆ ವೆಚ್ಚ ₹2 ಲಕ್ಷ ಪರಿಹಾರ ನೀಡಲಾಗುತ್ತದೆ. ವಿಮೆ ಪಡೆಯಲು ವಾರ್ಷಿಕ ₹956 ಪಾವತಿಸಬೇಕಿದ್ದು, ಅದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯು ₹717 ನೀಡಿದರೆ ರೈತರು ₹239 ಪಾವತಿಸಬೇಕಿದೆ.</p>.<p>ಜಿಲ್ಲೆಯಲ್ಲಿ 2,24,507 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದು, ರೈತರು ವಿಮೆ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಾಲ ತಾಣ www.coconut.board.gov.in/ ಅಥವಾ ತೋಟಗಾರಿಕೆ ಇಲಾಖೆ ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>