<p><strong>ತುಮಕೂರು</strong>: ಭೂ ಹಗರಣ ಹಾಗೂ ಡಿಜಿಟಲ್ ಸಹಿ ದುರುಪಯೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.</p>.<p>‘ಹಗರಣ ನಡೆದಿರುವುದು ಸತ್ಯ. ಆದರೆ ತಮ್ಮಿಂದ ನಡೆದಿಲ್ಲ’ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿ, ನೌಕರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಡಿಜಿಟಲ್ ಸಹಿ ದುರುಪಯೋಗ ಹಾಗೂ ದೊಡ್ಡ ಮಟ್ಟದ ಭೂ ಹಗರಣ ನಡೆದಿದ್ದರೂ ಈವರೆಗೂ ಎಫ್ಐಆರ್ ದಾಖಲಿಸದಿರುವುದು ಸಾರ್ವಜನಿಕರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಜಿಲ್ಲಾಧಿಕಾರಿಯ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು ಮಧುಗಿರಿ ತಾಲ್ಲೂಕಿನಲ್ಲಿ 43 ಎಕರೆ 11 ಗುಂಟೆ ಜಮೀನಿನ ಭೂ ಪರಿವರ್ತನೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.</p>.<p>ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿರುವ ತುಮ್ಮಲು ಗ್ರಾಮದ ಹಲವು ಸರ್ವೆ ನಂಬರ್ಗಳ ಜಮೀನು ಅರ್ಜಿಗಳು ಭೂ ಪರಿವರ್ತನೆಗಾಗಿ ತಮ್ಮ ಕಚೇರಿಗೆ ಸಲ್ಲಿಕೆಯಾಗಿದ್ದವು. ಇವುಗಳ ಪರಿಶೀಲನೆ ಸಂದರ್ಭದಲ್ಲಿ ಕೆಲವು ನ್ಯೂನತೆಗಳು ಕಂಡು ಬಂದಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತುಮ್ಮಲು ಗ್ರಾಮದಲ್ಲಿ ಈ ಹಿಂದೆ 43 ಎಕರೆ 11 ಗುಂಟೆ ಜಮೀನು ಮಂಜೂರಾತಿಯಲ್ಲಿ ಹಗರಣ ನಡೆದಿದೆ. ಈ ಜಮೀನು ಹಲವಾರು ಸರ್ವೇ ನಂಬರ್ಗಳನ್ನು ಒಳಗೊಂಡಿದೆ. ಈ ಬಗ್ಗೆ ಮಧುಗಿರಿ ತಾಲ್ಲೂಕು ಕಚೇರಿಯಲ್ಲಿರುವ ಮೂಲ ಕಡತಗಳನ್ನು ಪರಿಶೀಲಿಸಿದಾಗ 2005ರಲ್ಲೇ ಮಂಜೂರಾಗಿರುವುದು ಗೊತ್ತಾಗುತ್ತದೆ. ಆದರೆ ಇವು ನಕಲಿ ದಾಖಲೆಗಳೆಂಬುದು ಮೇಲುನೋಟಕ್ಕೆ ಕಂಡು ಬಂದಿವೆ ಎಂದು ಹೇಳಿದ್ದಾರೆ.</p>.<p>ಜಮೀನಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಮಧುಗಿರಿ ಉಪ ವಿಭಾಗಾಧಿಕಾರಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ನಕಲಿ ದಾಖಲೆಗಳನ್ನು ಸಾರ್ವಜನಿಕ ಮಾಹಿತಿಗಾಗಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.</p>.<p>ತನಿಖಾಧಿಕಾರಿಗಳಿಂದ ವರದಿ ಬಂದ ತಕ್ಷಣ ಸರ್ಕಾರಿ ಜಮೀನು ಎಂದು ದೃಢಪಟ್ಟಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತೆ ತಹಶೀಲ್ದಾರ್ಗೆ ಆದೇಶಿಸಲಾಗುವುದು. ನಕಲಿ ದಾಖಲೆ ಸೃಷ್ಟಿಸಿದವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಧುಗಿರಿ ತಹಶೀಲ್ದಾರ್ಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಭೂ ಹಗರಣ ಹಾಗೂ ಡಿಜಿಟಲ್ ಸಹಿ ದುರುಪಯೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.</p>.<p>‘ಹಗರಣ ನಡೆದಿರುವುದು ಸತ್ಯ. ಆದರೆ ತಮ್ಮಿಂದ ನಡೆದಿಲ್ಲ’ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿ, ನೌಕರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಡಿಜಿಟಲ್ ಸಹಿ ದುರುಪಯೋಗ ಹಾಗೂ ದೊಡ್ಡ ಮಟ್ಟದ ಭೂ ಹಗರಣ ನಡೆದಿದ್ದರೂ ಈವರೆಗೂ ಎಫ್ಐಆರ್ ದಾಖಲಿಸದಿರುವುದು ಸಾರ್ವಜನಿಕರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಜಿಲ್ಲಾಧಿಕಾರಿಯ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು ಮಧುಗಿರಿ ತಾಲ್ಲೂಕಿನಲ್ಲಿ 43 ಎಕರೆ 11 ಗುಂಟೆ ಜಮೀನಿನ ಭೂ ಪರಿವರ್ತನೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.</p>.<p>ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿರುವ ತುಮ್ಮಲು ಗ್ರಾಮದ ಹಲವು ಸರ್ವೆ ನಂಬರ್ಗಳ ಜಮೀನು ಅರ್ಜಿಗಳು ಭೂ ಪರಿವರ್ತನೆಗಾಗಿ ತಮ್ಮ ಕಚೇರಿಗೆ ಸಲ್ಲಿಕೆಯಾಗಿದ್ದವು. ಇವುಗಳ ಪರಿಶೀಲನೆ ಸಂದರ್ಭದಲ್ಲಿ ಕೆಲವು ನ್ಯೂನತೆಗಳು ಕಂಡು ಬಂದಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತುಮ್ಮಲು ಗ್ರಾಮದಲ್ಲಿ ಈ ಹಿಂದೆ 43 ಎಕರೆ 11 ಗುಂಟೆ ಜಮೀನು ಮಂಜೂರಾತಿಯಲ್ಲಿ ಹಗರಣ ನಡೆದಿದೆ. ಈ ಜಮೀನು ಹಲವಾರು ಸರ್ವೇ ನಂಬರ್ಗಳನ್ನು ಒಳಗೊಂಡಿದೆ. ಈ ಬಗ್ಗೆ ಮಧುಗಿರಿ ತಾಲ್ಲೂಕು ಕಚೇರಿಯಲ್ಲಿರುವ ಮೂಲ ಕಡತಗಳನ್ನು ಪರಿಶೀಲಿಸಿದಾಗ 2005ರಲ್ಲೇ ಮಂಜೂರಾಗಿರುವುದು ಗೊತ್ತಾಗುತ್ತದೆ. ಆದರೆ ಇವು ನಕಲಿ ದಾಖಲೆಗಳೆಂಬುದು ಮೇಲುನೋಟಕ್ಕೆ ಕಂಡು ಬಂದಿವೆ ಎಂದು ಹೇಳಿದ್ದಾರೆ.</p>.<p>ಜಮೀನಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಮಧುಗಿರಿ ಉಪ ವಿಭಾಗಾಧಿಕಾರಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ನಕಲಿ ದಾಖಲೆಗಳನ್ನು ಸಾರ್ವಜನಿಕ ಮಾಹಿತಿಗಾಗಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.</p>.<p>ತನಿಖಾಧಿಕಾರಿಗಳಿಂದ ವರದಿ ಬಂದ ತಕ್ಷಣ ಸರ್ಕಾರಿ ಜಮೀನು ಎಂದು ದೃಢಪಟ್ಟಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತೆ ತಹಶೀಲ್ದಾರ್ಗೆ ಆದೇಶಿಸಲಾಗುವುದು. ನಕಲಿ ದಾಖಲೆ ಸೃಷ್ಟಿಸಿದವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಧುಗಿರಿ ತಹಶೀಲ್ದಾರ್ಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>