ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಬಿಜೆಪಿಯ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ನಗರದಲ್ಲಿ ಭಾನುವಾರ ಶಿವಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಸಭೆ ಸೇರಿ ಶಿವಣ್ಣಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಸೊಗಡು ಶಿವಣ್ಣ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದ್ದಾರೆ. ಜಿಲ್ಲೆಯ ಶಕ್ತಿ ಕೇಂದ್ರವಾಗಿದ್ದಾರೆ. ಅವರ ಮೌನವನ್ನು ದೌರ್ಬಲ್ಯ ಎಂದು ಭಾವಿಸಬಾರದು. ಈ ಬಾರಿ ಚುನಾವಣೆಯ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು ಎಂದು ಕುಣಿಗಲ್ನ ನಟರಾಜ್, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಧನಿಯಕುಮಾರ್, ಮಧುಗಿರಿಯ ಪಿ.ಎನ್.ನರಸಿಂಹಮೂರ್ತಿ, ಬೆಳಗುಂಬ ಪ್ರಭಾಕರ್ ಇತರರು ಒತ್ತಾಯಿಸಿದರು.