ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ‘ಪರಮೇಶ್ವರ ಅವರು ಉಪಮುಖ್ಯಮಂತ್ರಿ ಆಗಿದ್ದಾಗ ಮಧುಗಿರಿಯನ್ನು ಏಕೆ ಜಿಲ್ಲೆ ಮಾಡಲಿಲ್ಲ. ಅವರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್ನ ಪ್ರಮುಖ ಮುಖಂಡರಾಗಿದ್ದರು. ಆಗ ಏಕೆ ಅವರಿಗೆ ಈ ಯೋಚನೆ ಬರಲಿಲ್ಲ. ಅವರು ಮನಸ್ಸು ಮಾಡಿದ್ದರೆ ಅಂದೇ ಮಧುಗಿರಿಯನ್ನು ಜಿಲ್ಲೆ ಮಾಡಬಹುದಿತ್ತು’ ಎಂದು ತಿಳಿಸಿದರು.