<p><strong>ತುಮಕೂರು</strong>: ಸ್ವಾಮಿ ವಿವೇಕಾನಂದರ 150ನೇ ಜಯಂತಿ ಅಂಗವಾಗಿ ವಿವೇಕಾನಂದ ಕ್ರೀಡಾಕ್ಲಬ್ ‘ಏಕತೆಗಾಗಿ ಓಟ’ ಎಂಬ ಹೆಸರಿನಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ‘ತುಮಕೂರು ಮ್ಯಾರಥಾನ್-2019’ ಓಟದ ಸ್ಪರ್ಧೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಚಾಲನೆ ನೀಡಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಸುಮಾರು 781 ಕ್ರೀಡಾಪಟುಗಳು ಭಾಗವಹಿಸಿದ್ದರು. ಪುರುಷ ಮತ್ತು ಮಹಿಳೆಯರಿಗೆ, 16 ವರ್ಷದೊಳಗಿನ ಬಾಲಕ– ಬಾಲಕಿಯರಿಗೆ, 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ವಿವಿಧ ಹಂತದ ಸ್ಪರ್ಧೆಗಳು ನಡೆದವು.</p>.<p>ಟೌನ್ಹಾಲ್, ಕೋಡಿಬಸವೇಶ್ವರ ದೇವಾಲಯ, ಶಿವಕುಮಾರ ಸ್ವಾಮೀಜಿ ಸರ್ಕಲ್, ಎಸ್ಐಟಿ ಮುಖ್ಯರಸ್ತೆ, ಎಸ್ಎಸ್ಪುರಂ ಮುಖ್ಯರಸ್ತೆ, ರಾಧಾಕೃಷ್ಣ ರಸ್ತೆಯ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯ ಕಂಡಿತ್ತು.</p>.<p>ಸಂಸದ ಎಸ್.ಪಿ.ಮುದ್ದಹನುಮೇಗೌಡ, ಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್, ವಿವೇಕಾನಂದ ಕ್ರೀಡಾಕ್ಲಬ್ ಅಧ್ಯಕ್ಷ ರಾಮಕೃಷ್ಣ, ಎಸ್.ಡಿ.ರಾಜಶೇಖರ್, ಚಂದನ್ಕುಮಾರ್ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸ್ವಾಮಿ ವಿವೇಕಾನಂದರ 150ನೇ ಜಯಂತಿ ಅಂಗವಾಗಿ ವಿವೇಕಾನಂದ ಕ್ರೀಡಾಕ್ಲಬ್ ‘ಏಕತೆಗಾಗಿ ಓಟ’ ಎಂಬ ಹೆಸರಿನಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ‘ತುಮಕೂರು ಮ್ಯಾರಥಾನ್-2019’ ಓಟದ ಸ್ಪರ್ಧೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಚಾಲನೆ ನೀಡಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಸುಮಾರು 781 ಕ್ರೀಡಾಪಟುಗಳು ಭಾಗವಹಿಸಿದ್ದರು. ಪುರುಷ ಮತ್ತು ಮಹಿಳೆಯರಿಗೆ, 16 ವರ್ಷದೊಳಗಿನ ಬಾಲಕ– ಬಾಲಕಿಯರಿಗೆ, 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ವಿವಿಧ ಹಂತದ ಸ್ಪರ್ಧೆಗಳು ನಡೆದವು.</p>.<p>ಟೌನ್ಹಾಲ್, ಕೋಡಿಬಸವೇಶ್ವರ ದೇವಾಲಯ, ಶಿವಕುಮಾರ ಸ್ವಾಮೀಜಿ ಸರ್ಕಲ್, ಎಸ್ಐಟಿ ಮುಖ್ಯರಸ್ತೆ, ಎಸ್ಎಸ್ಪುರಂ ಮುಖ್ಯರಸ್ತೆ, ರಾಧಾಕೃಷ್ಣ ರಸ್ತೆಯ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯ ಕಂಡಿತ್ತು.</p>.<p>ಸಂಸದ ಎಸ್.ಪಿ.ಮುದ್ದಹನುಮೇಗೌಡ, ಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್, ವಿವೇಕಾನಂದ ಕ್ರೀಡಾಕ್ಲಬ್ ಅಧ್ಯಕ್ಷ ರಾಮಕೃಷ್ಣ, ಎಸ್.ಡಿ.ರಾಜಶೇಖರ್, ಚಂದನ್ಕುಮಾರ್ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>