<p><strong>ತಿಪಟೂರು:</strong> ಪ್ರಧಾನಿ ನರೇಂದ್ರ ಮೋದಿ ಆಡಳಿತದ ಸರ್ಕಾರ ಕಳೆದ 10 ವರ್ಷಗಳಲ್ಲಿ ರೈತರಿಗೆ ನೆರವಾಗುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ರೈತರ ಭವಿಷ್ಯ ಉಜ್ವಲವಾಗಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ನಗರದಲ್ಲಿ ಆಯೋಜಿಸಲಾಗಿದ್ದ ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ 19ನೇ ಕಂತಿನ ಹಣ ವರ್ಗಾವಣೆ ನೇರಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು.</p>.<p>ತುಮಕೂರು ಜಿಲ್ಲೆಯ 2,42,447 ಫಲಾನುಭವಿಗಳಿಗೆ ₹48.49ಕೋಟಿ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ ಎಂದರು.</p>.<p>ದೇಶದ 9.7ಕೋಟಿ ಕುಟುಂಬಗಳಿಗೆ ₹22ಸಾವಿರ ಕೋಟಿಯನ್ನು ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದ್ದು ಕೃಷಿಗೆ ಸಹಕಾರಿಯಾಗಿದೆ. ಕಳೆದ ಆರು ವರ್ಷಗಳಲ್ಲಿ ರಾಜ್ಯದ ಸುಮಾರು 46ಲಕ್ಷ ರೈತರಿಗೆ ₹17,103ಕೋಟಿ ವರ್ಗಾಯಿಸಲಾಗಿದೆ. ರಾಜ್ಯದ 44.2 ಲಕ್ಷ ರೈತರಿಗೆ ₹884ಕೋಟಿ ಮೊತ್ತವನ್ನು ವರ್ಗಾಯಿಸಲಾಗಿದೆ ಎಂದರು.</p>.<p>ಜನವರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ರೈತರ ಕಲ್ಯಾಣ ಹಾಗೂ ಕೃಷಿಗೆ ಪ್ರೋತ್ಸಾಹ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. 2025-26ರಲ್ಲಿಯೂ ಪ್ರಧಾನಮಂತ್ರಿ ಫಸಲ್ಭೀಮಾ ಯೋಜನೆ ಮುಂದುವರೆಸಲು ಅನುಮೋದನೆ ನೀಡಿದೆ. ರಸಗೊಬ್ಬರಕ್ಕೆ ಹೆಚ್ಚುವರಿ ಸಬ್ಸಿಡಿ ನೀಡಲಾಗುವುದು ಎಂದರು.</p>.<p>ದೇಶದ ನೂರು ಕೃಷಿಪ್ರಧಾನ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಪ್ರಾರಂಭಿಸಲು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು ₹3ರಿಂದ ₹5ಲಕ್ಷಕ್ಕೆ ಹೆಚ್ಚಿಸಲಾಗಿದೆ. ದೇಶೀಯ ರಸಗೊಬ್ಬರ ಉತ್ಪಾದನೆ ಬಲಪಡಿಸಲು ಅಸ್ಸಾಂನಲ್ಲಿ 12.7ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಯೂರಿಯಾ ಸ್ಥಾವರ ಸ್ಥಾಪಿಸಲಾಗುವುದು ಎಂದರು.</p>.<p>ಶಾಸಕ ಜ್ಯೋತಿಗಣೇಶ್, ಸುರೇಶ್ಗೌಡ, ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್, ರವಿಹೆಬ್ಬಾಕ, ತಹಶೀಲ್ದಾರ್ ಪವನ್ಕುಮಾರ್, ಕೃಷಿ ವಿಸ್ತರಣಾಧಿಕಾರಿ ಶಿವಲಿಂಗಯ್ಯ, ದಿಶಾ ಸಮಿತಿ ಅಧ್ಯಕ್ಷ ಶಿವಪ್ರಸಾದ್, ಗೋವಿಂದೇಗೌಡ, ಡಾ.ನಂದೀಶ್, ಪವನ್, ಚಂದ್ರಶೇಖರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಪ್ರಧಾನಿ ನರೇಂದ್ರ ಮೋದಿ ಆಡಳಿತದ ಸರ್ಕಾರ ಕಳೆದ 10 ವರ್ಷಗಳಲ್ಲಿ ರೈತರಿಗೆ ನೆರವಾಗುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ರೈತರ ಭವಿಷ್ಯ ಉಜ್ವಲವಾಗಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ನಗರದಲ್ಲಿ ಆಯೋಜಿಸಲಾಗಿದ್ದ ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ 19ನೇ ಕಂತಿನ ಹಣ ವರ್ಗಾವಣೆ ನೇರಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು.</p>.<p>ತುಮಕೂರು ಜಿಲ್ಲೆಯ 2,42,447 ಫಲಾನುಭವಿಗಳಿಗೆ ₹48.49ಕೋಟಿ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ ಎಂದರು.</p>.<p>ದೇಶದ 9.7ಕೋಟಿ ಕುಟುಂಬಗಳಿಗೆ ₹22ಸಾವಿರ ಕೋಟಿಯನ್ನು ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದ್ದು ಕೃಷಿಗೆ ಸಹಕಾರಿಯಾಗಿದೆ. ಕಳೆದ ಆರು ವರ್ಷಗಳಲ್ಲಿ ರಾಜ್ಯದ ಸುಮಾರು 46ಲಕ್ಷ ರೈತರಿಗೆ ₹17,103ಕೋಟಿ ವರ್ಗಾಯಿಸಲಾಗಿದೆ. ರಾಜ್ಯದ 44.2 ಲಕ್ಷ ರೈತರಿಗೆ ₹884ಕೋಟಿ ಮೊತ್ತವನ್ನು ವರ್ಗಾಯಿಸಲಾಗಿದೆ ಎಂದರು.</p>.<p>ಜನವರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ರೈತರ ಕಲ್ಯಾಣ ಹಾಗೂ ಕೃಷಿಗೆ ಪ್ರೋತ್ಸಾಹ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. 2025-26ರಲ್ಲಿಯೂ ಪ್ರಧಾನಮಂತ್ರಿ ಫಸಲ್ಭೀಮಾ ಯೋಜನೆ ಮುಂದುವರೆಸಲು ಅನುಮೋದನೆ ನೀಡಿದೆ. ರಸಗೊಬ್ಬರಕ್ಕೆ ಹೆಚ್ಚುವರಿ ಸಬ್ಸಿಡಿ ನೀಡಲಾಗುವುದು ಎಂದರು.</p>.<p>ದೇಶದ ನೂರು ಕೃಷಿಪ್ರಧಾನ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಪ್ರಾರಂಭಿಸಲು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು ₹3ರಿಂದ ₹5ಲಕ್ಷಕ್ಕೆ ಹೆಚ್ಚಿಸಲಾಗಿದೆ. ದೇಶೀಯ ರಸಗೊಬ್ಬರ ಉತ್ಪಾದನೆ ಬಲಪಡಿಸಲು ಅಸ್ಸಾಂನಲ್ಲಿ 12.7ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಯೂರಿಯಾ ಸ್ಥಾವರ ಸ್ಥಾಪಿಸಲಾಗುವುದು ಎಂದರು.</p>.<p>ಶಾಸಕ ಜ್ಯೋತಿಗಣೇಶ್, ಸುರೇಶ್ಗೌಡ, ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್, ರವಿಹೆಬ್ಬಾಕ, ತಹಶೀಲ್ದಾರ್ ಪವನ್ಕುಮಾರ್, ಕೃಷಿ ವಿಸ್ತರಣಾಧಿಕಾರಿ ಶಿವಲಿಂಗಯ್ಯ, ದಿಶಾ ಸಮಿತಿ ಅಧ್ಯಕ್ಷ ಶಿವಪ್ರಸಾದ್, ಗೋವಿಂದೇಗೌಡ, ಡಾ.ನಂದೀಶ್, ಪವನ್, ಚಂದ್ರಶೇಖರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>