<p><strong>ತುಮಕೂರು:</strong> ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಈಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಿಂದ ದ್ವಿದಳ ಧಾನ್ಯ ಬೇಳೆ ಸಂಸ್ಕರಣಾ ಘಟಕದ ಸ್ಥಾಪನೆ ಮತ್ತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವಿಜ್ಞಾನ ಕೇಂದ್ರದ ಮುಖ್ಯ ವಿಜ್ಞಾನಿ ಮೂಡಲಗಿರಿಯಪ್ಪ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದರು. ಬೇಳೆ ಸಂಸ್ಕರಣೆ ಕುರಿತು ಪೂರ್ವ ಭಾವಿಯಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರು, ಮಹಿಳಾ ಸ್ವಸಹಾಯ ಗುಂಪು, ಯುವ ಜನರಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.</p>.<p>ವಿಜ್ಞಾನಿ ಎಚ್.ಎಸ್.ಲತಾ, ‘ಸ್ಥಳೀಯವಾಗಿ ಉದ್ಯಮ ಆರಂಭಿಸಲು ಇದು ಸುವರ್ಣಾವಕಾಶ. ಗ್ರಾಮೀಣ ಭಾಗದ ಆರ್ಥಿಕತೆಗೆ ಬಲ ನೀಡುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ರೈತರು ಸಂಸ್ಕರಣಾ ಘಟಕ ಅಳವಡಿಸಿಕೊಂಡು ಬೇಳೆ ಶುದ್ಧೀಕರಣ, ವಿಭಜನೆ ಮತ್ತು ಪ್ಯಾಕೇಜ್ ಮಾಡಿ ಮಾರುಕಟ್ಟೆಗೆ ಸರಬರಾಜು ಮಾಡಬಹುದು’ ಎಂದು ತಿಳಿಸಿದರು.</p>.<p>ಜಿಕೆವಿಕೆ ಮಣ್ಣು ವಿಜ್ಞಾನಿ ಬಿ.ಜಿ.ವಾಸಂತಿ, ತಾಂತ್ರಿಕ ಸಹಾಯಕ ಜಾಧವ್ ಬಾಲಾಜಿ ಅಮೃತ್ರಾವ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಈಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಿಂದ ದ್ವಿದಳ ಧಾನ್ಯ ಬೇಳೆ ಸಂಸ್ಕರಣಾ ಘಟಕದ ಸ್ಥಾಪನೆ ಮತ್ತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವಿಜ್ಞಾನ ಕೇಂದ್ರದ ಮುಖ್ಯ ವಿಜ್ಞಾನಿ ಮೂಡಲಗಿರಿಯಪ್ಪ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದರು. ಬೇಳೆ ಸಂಸ್ಕರಣೆ ಕುರಿತು ಪೂರ್ವ ಭಾವಿಯಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರು, ಮಹಿಳಾ ಸ್ವಸಹಾಯ ಗುಂಪು, ಯುವ ಜನರಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.</p>.<p>ವಿಜ್ಞಾನಿ ಎಚ್.ಎಸ್.ಲತಾ, ‘ಸ್ಥಳೀಯವಾಗಿ ಉದ್ಯಮ ಆರಂಭಿಸಲು ಇದು ಸುವರ್ಣಾವಕಾಶ. ಗ್ರಾಮೀಣ ಭಾಗದ ಆರ್ಥಿಕತೆಗೆ ಬಲ ನೀಡುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ರೈತರು ಸಂಸ್ಕರಣಾ ಘಟಕ ಅಳವಡಿಸಿಕೊಂಡು ಬೇಳೆ ಶುದ್ಧೀಕರಣ, ವಿಭಜನೆ ಮತ್ತು ಪ್ಯಾಕೇಜ್ ಮಾಡಿ ಮಾರುಕಟ್ಟೆಗೆ ಸರಬರಾಜು ಮಾಡಬಹುದು’ ಎಂದು ತಿಳಿಸಿದರು.</p>.<p>ಜಿಕೆವಿಕೆ ಮಣ್ಣು ವಿಜ್ಞಾನಿ ಬಿ.ಜಿ.ವಾಸಂತಿ, ತಾಂತ್ರಿಕ ಸಹಾಯಕ ಜಾಧವ್ ಬಾಲಾಜಿ ಅಮೃತ್ರಾವ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>