<p><strong>ತುಮಕೂರು:</strong> ನಗರದ ಹೊರವಲಯದ ದಿಬ್ಬೂರು ಬಳಿ ಶುಕ್ರವಾರ ರಾತ್ರಿ ರೌಡಿಶೀಟರ್ ಮನು ಅಲಿಯಾಸ್ ಮನೋಜ್ (25) ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p><p>ಪ್ರಕರಣವೊಂದರ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮನೋಜ್ ಕಾನ್ಸ್ಟೇಬಲ್ ಚೇತನ್ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಸ್ಥಳದಲ್ಲಿದ್ದ ನಗರ ಠಾಣೆ ಸರ್ಕಲ್ ಇನಸ ಸ್ಪೆಕ್ಟರ್ ದಿನೇಶ್ಕುಮಾರ್ ಶರಣಾಗುವಂತೆ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಶರಣಾಗದೆ ಪರಾರಿಯಾಗಲು ಯತ್ನಿಸಿದ್ದು, ಕಾಲಿಗೆ ಗುಂಡು ಹೊಡೆದಿದ್ದಾರೆ.</p><p>ಕಾನ್ಸ್ಟೇಬಲ್ ಚೇತನ್ ಹಾಗೂ ರೌಡಿಶೀಟರ್ ಮನೋಜ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಜುಲೈ 21ರಂದು ಮನೋಜ್, ರೋಹಿತ್ ಸೇರಿ ಮನು ಮತ್ತು ಪವನ್ ಎಂಬ ರೌಡಿಶೀಟರ್ಗಳ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಮನೋಜ್ರನ್ನು ಶುಕ್ರವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದರು. ಸ್ಥಳ ಮಹಜರು ಮತ್ತು ಸಾಕ್ಷ್ಯ ಸಂಗ್ರಹಕ್ಕೆ ಕರೆದುಕೊಂಡು ಹೋದಾಗ ಘಟನೆ ನಡೆದಿದೆ.</p><p>‘ಗಲಾಟೆ ಮಾಡಿಕೊಂಡ ನಾಲ್ಕು ಜನ ಈ ಹಿಂದೆ ಒಂದೇ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದರು. ಭಿನ್ನಾಭಿಪ್ರಾಯವುಂಟಾಗಿ ಪರಸ್ಪರ ದೂರ ಆಗಿದ್ದರು. ಈಚೆಗೆ ಎರಡು ಗ್ಯಾಂಗ್ಗಳ ಮಧ್ಯೆ ಗಲಾಟೆ ಆಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು. ಮೊದಲ ಆರೋಪಿ ರೋಹಿತ್ರನ್ನು ಈಗಾಗಲೇ ಬಂಧಿಸಲಾಗಿದೆ. ಮನೋಜ್ ವಿರುದ್ಧ ಕೊಲೆಯ ಯತ್ನ ಪ್ರಕರಣ ದಾಖಲಿಸಲಾಗುವುದು. ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಹೊರವಲಯದ ದಿಬ್ಬೂರು ಬಳಿ ಶುಕ್ರವಾರ ರಾತ್ರಿ ರೌಡಿಶೀಟರ್ ಮನು ಅಲಿಯಾಸ್ ಮನೋಜ್ (25) ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p><p>ಪ್ರಕರಣವೊಂದರ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮನೋಜ್ ಕಾನ್ಸ್ಟೇಬಲ್ ಚೇತನ್ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಸ್ಥಳದಲ್ಲಿದ್ದ ನಗರ ಠಾಣೆ ಸರ್ಕಲ್ ಇನಸ ಸ್ಪೆಕ್ಟರ್ ದಿನೇಶ್ಕುಮಾರ್ ಶರಣಾಗುವಂತೆ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಶರಣಾಗದೆ ಪರಾರಿಯಾಗಲು ಯತ್ನಿಸಿದ್ದು, ಕಾಲಿಗೆ ಗುಂಡು ಹೊಡೆದಿದ್ದಾರೆ.</p><p>ಕಾನ್ಸ್ಟೇಬಲ್ ಚೇತನ್ ಹಾಗೂ ರೌಡಿಶೀಟರ್ ಮನೋಜ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಜುಲೈ 21ರಂದು ಮನೋಜ್, ರೋಹಿತ್ ಸೇರಿ ಮನು ಮತ್ತು ಪವನ್ ಎಂಬ ರೌಡಿಶೀಟರ್ಗಳ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಮನೋಜ್ರನ್ನು ಶುಕ್ರವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದರು. ಸ್ಥಳ ಮಹಜರು ಮತ್ತು ಸಾಕ್ಷ್ಯ ಸಂಗ್ರಹಕ್ಕೆ ಕರೆದುಕೊಂಡು ಹೋದಾಗ ಘಟನೆ ನಡೆದಿದೆ.</p><p>‘ಗಲಾಟೆ ಮಾಡಿಕೊಂಡ ನಾಲ್ಕು ಜನ ಈ ಹಿಂದೆ ಒಂದೇ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದರು. ಭಿನ್ನಾಭಿಪ್ರಾಯವುಂಟಾಗಿ ಪರಸ್ಪರ ದೂರ ಆಗಿದ್ದರು. ಈಚೆಗೆ ಎರಡು ಗ್ಯಾಂಗ್ಗಳ ಮಧ್ಯೆ ಗಲಾಟೆ ಆಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು. ಮೊದಲ ಆರೋಪಿ ರೋಹಿತ್ರನ್ನು ಈಗಾಗಲೇ ಬಂಧಿಸಲಾಗಿದೆ. ಮನೋಜ್ ವಿರುದ್ಧ ಕೊಲೆಯ ಯತ್ನ ಪ್ರಕರಣ ದಾಖಲಿಸಲಾಗುವುದು. ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>