ಮೋಹನಕೃಷ್ಣ ಅವರ ಮನೆಯಲ್ಲಿ ರತ್ನಮ್ಮ ಚಹಾ ಕುಡಿಯುತ್ತಿದ್ದ ಸಮಯದಲ್ಲಿ ಗೋಡೆ ಕುಸಿದು ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿದ ರತ್ನಮ್ಮ ಅವರನ್ನು ಮಣ್ಣಿನಿಂದ ಹೊರತೆಗೆದು ತಾವರೆಕೆರೆ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದ ಜಯಮ್ಮ, ವೆಂಕಟೇಶ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.