ಮಂಡಿಪೇಟೆ ರಸ್ತೆಗಳು, ಖಾಸಗಿ ಬಸ್ ನಿಲ್ದಾಣದ ಉತ್ತರ ಮತ್ತು ದಕ್ಷಿಣಕ್ಕೆ ಇರುವ ರಸ್ತೆ, ಭಗವಾನ್ ಮಹಾವೀರ ರಸ್ತೆಗಳ ಅಭಿವೃದ್ಧಿಯ ಗುತ್ತಿಗೆ ಪಡೆದಿರುವ ಸುಧಾಕರ ಪೆರಿಟಾಲ, ಸಿದ್ಧಾರ್ಥ ಸಿವಿಲ್ ವರ್ಕ್ಸ್ ₹ 6.88 ಲಕ್ಷ, ಎಂ.ಜಿ.ರಸ್ತೆ, ಹೊರಪೇಟೆ ರಸ್ತೆ, ಜೆ.ಸಿ.ರಸ್ತೆ ಮತ್ತು ವಿವೇಕಾನಂದ ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳಾಗಿಸಿ, ಐದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಾದ ಗುತ್ತಿಗೆದಾರ ಬಿ.ಎಂ.ರಂಗೇಗೌಡರು ₹ 5.63 ಲಕ್ಷ ದಂಡ ತೆರಬೇಕಿದೆ.