ತುಮಕೂರು: ಜನರ ಓಡಾಟ ನಿಯಂತ್ರಿಸಲು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಖುದ್ದು ರಸ್ತೆಗಿಳಿದಿದ್ದರು. ನಗರದ ಕೋಡಿ ಬಸವಣ್ಣನ ದೇವಸ್ಥಾನದ ಬಳಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ, ಕಾರುಗಳನ್ನು ತಡೆದು ವಿಚಾರಣೆ ನಡೆಸಿದರು.
ಅನಗತ್ಯವಾಗಿ ಓಡಾಡದಂತೆ ಜನರಿಗೆ ಸೂಚನೆ ನೀಡಿದರು. ಕಾರು ಮತ್ತು ಬೈಕ್ಗಳಲ್ಲಿ ಬಂದ ಯುವಕರ ದಾಖಲೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ಬುಧವಾರ ಜಿಲ್ಲೆಯಾದ್ಯಂತ ಸಕಾರಣವಿಲ್ಲದೆ ತಿರುಗಾಡುತ್ತಿದ್ದ 33 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.