ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Last Updated 11 ಜೂನ್ 2022, 5:04 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾತ್ರಿ ಎಸ್ಎಸ್ಐಟಿ ಕಾಲೇಜಿನ ವಿದ್ಯಾರ್ಥಿನಿಯರಿಂಗ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಕವಿತಾ (21) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರು ನಗರದ ಕವಿತಾ ಅಂತಿಮ ವರ್ಷದ ಎಂಜಿನಿಯರಿಂಗ್‌ನಲ್ಲಿ ಅಧ್ಯಯನ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಿಲಕ್ ಪಾರ್ಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ರಾತ್ರಿ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಭುವನ್, ಅದಕ್ಕೂ ಎರಡು ದಿನಗಳ ಹಿಂದೆ ಎಸ್ಐಟಿ ಕಾಲೇಜಿನ ವಿದ್ಯಾರ್ಥಿ ಸೋಹಂ ನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದರು‌. ಈ ಎರಡೂ ಘಟನೆಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT