ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದುಕಿಗೆ ಸಂಚಕಾರ ತಂದ ‘ಟಿಕ್-ಟಾಕ್’ ಕ್ರೇಜ್‌: ಯುವಕ ಸಾವು

Last Updated 23 ಜೂನ್ 2019, 13:15 IST
ಅಕ್ಷರ ಗಾತ್ರ

ತುಮಕೂರು: ಟಿಕ್‌–ಟಾಕ್ ಮಾಡಲು ಹೋಗಿ ಬೆನ್ನುಹುರಿ (ಸ್ಪೈನಲ್ ಕಾರ್ಡ್) ಮುರಿದುಕೊಂಡಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗ್ರಾಮದ ಯುವಕ ಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು.

ಕುಮಾರ್ ಆರ್ಕೆಸ್ಟ್ರಾಗಳಲ್ಲಿ ಗಾಯಕ ಹಾಗೂ ನೃತ್ಯಪಟುವಾಗಿದ್ದರು. ಜೂ.15ರಂದು ಗ್ರಾಮದ ಶಾಲಾ ಮೈದಾನದಲ್ಲಿ ಸ್ನೇಹಿತರ ಜೊತೆ ಟಿಕ್‌–ಟಾಕ್ ಮಾಡುತ್ತಿದ್ದರು. ಈ ವೇಳೆ ಹಿಮ್ಮುಖವಾಗಿ ನೆಗೆದಿದ್ದು ಆಯತಪ್ಪಿ ನೆಲಕ್ಕೆ ಬಿದ್ದಿದ್ದರು. ಆ ರಭಸಕ್ಕೆ ಬೆನ್ನುಹುರಿ ಪೂರ್ಣವಾಗಿ ಮುರಿದಿತ್ತು. ಅವರು ಚೇತರಿಸಿಕೊಳ್ಳುವ ಕುರಿತು ವೈದ್ಯರು ಸ್ಪಷ್ಟವಾದ ಭರವಸೆ ನೀಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT