<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು:</strong> ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆ. 15ರಂದು ಮಧ್ಯಾಹ್ನ 3 ಗಂಟೆಗೆ ನಗರದಲ್ಲಿ ವೈಭವದ ತಿರಂಗಾ ಯಾತ್ರೆ ನಡೆಯಲಿದೆ.</p>.<p>‘ಮಹಾನಗರ ಪಾಲಿಕೆ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದ ನಂತರ ಯಾತ್ರೆ ಪ್ರಾರಂಭಿಸಲಾಗುವುದು. ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಗುಂಚಿ ಚೌಕ ವೃತ್ತ ಮೂಲಕ ಸ್ವತಂತ್ರ ಚೌಕದ ವರೆಗೆ ಸಾಗಲಿದೆ’ ಎಂದು ತಿರಂಗ ಯಾತ್ರೆ ಸಮಿತಿ ಸಂಚಾಲಕ ಜಿ.ಆರ್.ಸುರೇಶ್ ಇಲ್ಲಿ ಬುಧವಾರ ಹೇಳಿದರು.</p>.<p>ಮಠಾಧೀಶರು, ಸಂಘ–ಸಂಸ್ಥೆ, ನಿವೃತ್ತ ಸೈನಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಎಲ್ಲ ಸಮುದಾಯಗಳ ಮುಖಂಡರು, ಕೈಗಾರಿಕೋದ್ಯಮಿಗಳು, ವಕೀಲರು, ವೈದ್ಯರು, ವರ್ತಕರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ‘ವಿವಿಧ ಕಲಾ ತಂಡಗಳ ಆಕರ್ಷಕ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆಯಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಕಚೇರಿ ಮೇಲೆ ಆ. 15ರ ಸಂಜೆ 6 ಗಂಟೆಯ ವರೆಗೆ ರಾಷ್ಟ್ರ ಧ್ವಜ ಹಾರಿಸಬೇಕು’ ಎಂದರು.</p>.<p>ಮುಖಂಡರಾದ ವೈ.ಎಚ್.ಹುಚ್ಚಯ್ಯ, ಕೆ.ಜೆ.ರುದ್ರಪ್ಪ, ಆರ್.ಎ.ಸುರೇಶ್ಕುಮಾರ್, ಡಾ.ಕೆ.ಪಿ.ಸುರೇಶ್ಬಾಬು, ಪಿ.ಎನ್.ರಾಮಯ್ಯ, ಕೆ.ಧನುಷ್, ಎಚ್.ಜಿ.ಸದಾಶಿವಯ್ಯ, ಸುರೇಶ್ ರಾವ್, ಕೇಶವಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು:</strong> ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆ. 15ರಂದು ಮಧ್ಯಾಹ್ನ 3 ಗಂಟೆಗೆ ನಗರದಲ್ಲಿ ವೈಭವದ ತಿರಂಗಾ ಯಾತ್ರೆ ನಡೆಯಲಿದೆ.</p>.<p>‘ಮಹಾನಗರ ಪಾಲಿಕೆ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದ ನಂತರ ಯಾತ್ರೆ ಪ್ರಾರಂಭಿಸಲಾಗುವುದು. ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಗುಂಚಿ ಚೌಕ ವೃತ್ತ ಮೂಲಕ ಸ್ವತಂತ್ರ ಚೌಕದ ವರೆಗೆ ಸಾಗಲಿದೆ’ ಎಂದು ತಿರಂಗ ಯಾತ್ರೆ ಸಮಿತಿ ಸಂಚಾಲಕ ಜಿ.ಆರ್.ಸುರೇಶ್ ಇಲ್ಲಿ ಬುಧವಾರ ಹೇಳಿದರು.</p>.<p>ಮಠಾಧೀಶರು, ಸಂಘ–ಸಂಸ್ಥೆ, ನಿವೃತ್ತ ಸೈನಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಎಲ್ಲ ಸಮುದಾಯಗಳ ಮುಖಂಡರು, ಕೈಗಾರಿಕೋದ್ಯಮಿಗಳು, ವಕೀಲರು, ವೈದ್ಯರು, ವರ್ತಕರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ‘ವಿವಿಧ ಕಲಾ ತಂಡಗಳ ಆಕರ್ಷಕ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆಯಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಕಚೇರಿ ಮೇಲೆ ಆ. 15ರ ಸಂಜೆ 6 ಗಂಟೆಯ ವರೆಗೆ ರಾಷ್ಟ್ರ ಧ್ವಜ ಹಾರಿಸಬೇಕು’ ಎಂದರು.</p>.<p>ಮುಖಂಡರಾದ ವೈ.ಎಚ್.ಹುಚ್ಚಯ್ಯ, ಕೆ.ಜೆ.ರುದ್ರಪ್ಪ, ಆರ್.ಎ.ಸುರೇಶ್ಕುಮಾರ್, ಡಾ.ಕೆ.ಪಿ.ಸುರೇಶ್ಬಾಬು, ಪಿ.ಎನ್.ರಾಮಯ್ಯ, ಕೆ.ಧನುಷ್, ಎಚ್.ಜಿ.ಸದಾಶಿವಯ್ಯ, ಸುರೇಶ್ ರಾವ್, ಕೇಶವಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>