<p><strong>ತುಮಕೂರು:</strong> ಕೊರೊನಾ ಕಾರಣ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಮಕೂರು– ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ ಸೋಮವಾರದಿಂದ ಆರಂಭಗೊಂಡಿದೆ.</p>.<p>ಬೆಳಿಗ್ಗೆ 7.30ಕ್ಕೆ ರೈಲು ಸಂಚಾರ ಆರಂಭಿಸಿದ್ದು, ನಿತ್ಯ ಬೆಂಗಳೂರಿಗೆ ಉದ್ಯೋಗಗಳಿಗೆ ತೆರಳುವವರು ಸಂತಸ<br />ದಿಂದಲೇ ಪ್ರಯಾಣ ಬೆಳೆಸಿದರು. ಸಂಸದ ಜಿ.ಎಸ್.ಬಸವರಾಜ್, ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ಸದ್ಯಕ್ಕೆ ಯಶವಂತಪುರದ ಬದಲು ಕೆಂಪೇಗೌಡ ರೈಲು ನಿಲ್ದಾಣದವರೆಗೂ ಸಂಚರಿಸು<br />ವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸಂಪೂರ್ಣವಾಗಿ ರೈಲು ಸಂಚಾರ ಆರಂಭವಾಗುವವರೆಗೂ ಮೆಜೆಸ್ಟಿಕ್ವರೆಗೆ ಈ ರೈಲು ತೆರಳಲಿ. ರೈಲುಗಳ ಸಂಚಾರ ಸಂಪೂರ್ಣವಾಗಿ ಆರಂಭವಾದ ಬಳಿಕ ಯಶವಂತಪುರಕ್ಕೆ ಸೀಮಿತಗೊಳಿಸಲಿ ಎಂದರು.</p>.<p>ಪಾಲಿಕೆ ಸದಸ್ಯೆ ಗಿರಿಜಾ, ಪ್ರಯಾಣಿಕರು ತಮ್ಮ ಆರೋಗ್ಯ ದೃಷ್ಟಿಯಿಂದ ಅಂತರ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.</p>.<p>ತುಮಕೂರು– ಯಶವಂತಪುರ ಪ್ಯಾಸೆಂಜರ್ ರೈಲಿಗೆ ಮಾತ್ರ ನಗರದರೈಲ್ವೆ ನಿಲ್ದಾಣದ ಕೌಂಟರ್ನಲ್ಲಿ ಪ್ರಯಾಣಿಕರಿಗೆ ಕಾಯ್ದಿರಿಸದ ಟಿಕೆಟ್ ವಿತರಿಸಲಾಗುತ್ತದೆ. ಉಳಿದ ಇನ್ಯಾವುದೇ ರೈಲುಗಳಿಗೆ ಕೌಂಟರ್ನಲ್ಲಿ ಟಿಕೆಟ್ ನೀಡುತ್ತಿಲ್ಲ. ಉಳಿದ ರೈಲುಗಳಿಗೆ ಆನ್ಲೈನ್ನಲ್ಲೇ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬೇಕು ಎಂದು ರೈಲ್ವೆ ಇಲಾಖೆ ವಾಣಿಜ್ಯ ನಿರೀಕ್ಷಕ ಧನಂಜಯ್ಯ ತಿಳಿಸಿದರು.</p>.<p>ಶಿವಮೊಗ್ಗ– ಬೆಂಗಳೂರು ಇಂಟರ್ ಸಿಟಿ, ರಾಣಿಚನ್ನಮ್ಮ, ಧಾರವಾಡ ಇಂಟರ್ ಸಿಟಿ ಹಾಗೂ ರಾತ್ರಿ ಹೊಸ<br />ಪೇಟೆ ಎಕ್ಸ್ಪ್ರೆಸ್ ರೈಲುಗಳು ಸೋಮವಾರದಿಂದ ಸಂಚಾರ ಆರಂಭಿಸಿವೆ. ಆನ್ಲೈನ್ನಲ್ಲೇ ಟಿಕೆಟ್ ಕಾಯ್ದಿರಿಸಬೇಕಾಗಿದೆ ಎಂದು ತಿಳಿಸಿದರು.</p>.<p>ರೈಲ್ವೆ ಇಲಾಖೆಯ ಬೆಂಗಳೂರು ವಿಭಾಗದ ಅಧಿಕಾರಿ ಲಕ್ಷ್ಮಣ್ಸಿಂಗ್, ಇಕ್ಬಾಲ್ ಅಹಮದ್, ನಿಲ್ದಾಣ ಅಧಿಕಾರಿ ರಮೇಶ್ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೊರೊನಾ ಕಾರಣ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಮಕೂರು– ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ ಸೋಮವಾರದಿಂದ ಆರಂಭಗೊಂಡಿದೆ.</p>.<p>ಬೆಳಿಗ್ಗೆ 7.30ಕ್ಕೆ ರೈಲು ಸಂಚಾರ ಆರಂಭಿಸಿದ್ದು, ನಿತ್ಯ ಬೆಂಗಳೂರಿಗೆ ಉದ್ಯೋಗಗಳಿಗೆ ತೆರಳುವವರು ಸಂತಸ<br />ದಿಂದಲೇ ಪ್ರಯಾಣ ಬೆಳೆಸಿದರು. ಸಂಸದ ಜಿ.ಎಸ್.ಬಸವರಾಜ್, ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ಸದ್ಯಕ್ಕೆ ಯಶವಂತಪುರದ ಬದಲು ಕೆಂಪೇಗೌಡ ರೈಲು ನಿಲ್ದಾಣದವರೆಗೂ ಸಂಚರಿಸು<br />ವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸಂಪೂರ್ಣವಾಗಿ ರೈಲು ಸಂಚಾರ ಆರಂಭವಾಗುವವರೆಗೂ ಮೆಜೆಸ್ಟಿಕ್ವರೆಗೆ ಈ ರೈಲು ತೆರಳಲಿ. ರೈಲುಗಳ ಸಂಚಾರ ಸಂಪೂರ್ಣವಾಗಿ ಆರಂಭವಾದ ಬಳಿಕ ಯಶವಂತಪುರಕ್ಕೆ ಸೀಮಿತಗೊಳಿಸಲಿ ಎಂದರು.</p>.<p>ಪಾಲಿಕೆ ಸದಸ್ಯೆ ಗಿರಿಜಾ, ಪ್ರಯಾಣಿಕರು ತಮ್ಮ ಆರೋಗ್ಯ ದೃಷ್ಟಿಯಿಂದ ಅಂತರ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.</p>.<p>ತುಮಕೂರು– ಯಶವಂತಪುರ ಪ್ಯಾಸೆಂಜರ್ ರೈಲಿಗೆ ಮಾತ್ರ ನಗರದರೈಲ್ವೆ ನಿಲ್ದಾಣದ ಕೌಂಟರ್ನಲ್ಲಿ ಪ್ರಯಾಣಿಕರಿಗೆ ಕಾಯ್ದಿರಿಸದ ಟಿಕೆಟ್ ವಿತರಿಸಲಾಗುತ್ತದೆ. ಉಳಿದ ಇನ್ಯಾವುದೇ ರೈಲುಗಳಿಗೆ ಕೌಂಟರ್ನಲ್ಲಿ ಟಿಕೆಟ್ ನೀಡುತ್ತಿಲ್ಲ. ಉಳಿದ ರೈಲುಗಳಿಗೆ ಆನ್ಲೈನ್ನಲ್ಲೇ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬೇಕು ಎಂದು ರೈಲ್ವೆ ಇಲಾಖೆ ವಾಣಿಜ್ಯ ನಿರೀಕ್ಷಕ ಧನಂಜಯ್ಯ ತಿಳಿಸಿದರು.</p>.<p>ಶಿವಮೊಗ್ಗ– ಬೆಂಗಳೂರು ಇಂಟರ್ ಸಿಟಿ, ರಾಣಿಚನ್ನಮ್ಮ, ಧಾರವಾಡ ಇಂಟರ್ ಸಿಟಿ ಹಾಗೂ ರಾತ್ರಿ ಹೊಸ<br />ಪೇಟೆ ಎಕ್ಸ್ಪ್ರೆಸ್ ರೈಲುಗಳು ಸೋಮವಾರದಿಂದ ಸಂಚಾರ ಆರಂಭಿಸಿವೆ. ಆನ್ಲೈನ್ನಲ್ಲೇ ಟಿಕೆಟ್ ಕಾಯ್ದಿರಿಸಬೇಕಾಗಿದೆ ಎಂದು ತಿಳಿಸಿದರು.</p>.<p>ರೈಲ್ವೆ ಇಲಾಖೆಯ ಬೆಂಗಳೂರು ವಿಭಾಗದ ಅಧಿಕಾರಿ ಲಕ್ಷ್ಮಣ್ಸಿಂಗ್, ಇಕ್ಬಾಲ್ ಅಹಮದ್, ನಿಲ್ದಾಣ ಅಧಿಕಾರಿ ರಮೇಶ್ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>