ಇದರಿಂದ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಕುತ್ತು ಬರಲಿದೆ. ಪಠ್ಯಪುಸ್ತಕ ರಚನೆ, ಶುಲ್ಕ ನಿಗದಿ, ಪ್ರಶ್ನೆಪತ್ರಿಕೆಗಳ ತಯಾರಿ, ಪರೀಕ್ಷೆ ನಡೆಸುವುದು, ಹೊಸ ಉದ್ಯೋಗ ಅವಕಾಶ ಸೃಷ್ಟಿ ಮತ್ತು ಅತಿಥಿ ಉಪನ್ಯಾಸಕರಿಗೆ ಕಂಟಕವಾಗಲಿದೆ ಎಂದು ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಈ.ಶಿವಣ್ಣ, ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಘವೇಂದ್ರ, ಎಸ್ಎಫ್ಐ ನಗರ ಘಟಕದ ಅಧ್ಯಕ್ಷ ನವೀನ್ ದೂರಿದ್ದಾರೆ.