<p><strong>ತುಮಕೂರು:</strong> ತುಮಕೂರು ವಿಶ್ವವಿದ್ಯಾನಿಲಯದ 13 ನೇ ಘಟಿಕೋತ್ಸವ ಮಂಗಳವಾರ (ಫೆ.25) ನಡೆಯಲಿದೆ. ಈ ಬಾರಿ ವಿವಿಧ ವಿಭಾಗಗಳ ಕೋರ್ಸ್ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿರುವ 70 ವಿದ್ಯಾರ್ಥಿಗಳು 92 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಳ್ಳಲಿದ್ದಾರೆ.</p>.<p>ಮೂವರಿಗೆ ಡಿ.ಲಿಟ್. ಪದವಿ, ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ 94 ವಿದ್ಯಾರ್ಥಿಗಳಿಗೆಪಿಎಚ್.ಡಿ. ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ. 6257ವಿದ್ಯಾರ್ಥಿಗಳು ಪದವಿ,1587 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ಶಿಕ್ಷಣ, ಸಮಾಜಸೇವೆ, ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕುಣಿಗಲ್ ತಾಲ್ಲೂಕಿನ ಸಿ.ಎನ್.ಮಂಚೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ವಿ.ವಿ.ಕುಲಪತಿ ವೈ.ಎಸ್.ಸಿದ್ದೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಂ.ಎಸ್ಸಿ. ಗಣಿತದಲ್ಲಿ ಎಚ್.ಎಸ್.ಮನೋಹರ್ 5 ಚಿನ್ನದ ಪದಕ, ಎಂ.ಕಾಂ.ನಲ್ಲಿ ಎಂ.ಸಿ.ದಿವ್ಯಾಮಣಿ 4 ಚಿನ್ನದ ಪದಕ, ಎಂ.ಎ.ಕನ್ನಡದಲ್ಲಿ ಟಿ.ಡಿ.ಲಾವಣ್ಯ ಅವರು 3 ಚಿನ್ನದ ಪದಕಗಳನ್ನು ಗಳಿಸಿದ್ದಾರೆ.</p>.<p>ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ ಅಧ್ಯಕ್ಷ ಮಣಿಕ್ ರಾವ್ ಎಂ.ಸಾಲೊಂಖೆ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತುಮಕೂರು ವಿಶ್ವವಿದ್ಯಾನಿಲಯದ 13 ನೇ ಘಟಿಕೋತ್ಸವ ಮಂಗಳವಾರ (ಫೆ.25) ನಡೆಯಲಿದೆ. ಈ ಬಾರಿ ವಿವಿಧ ವಿಭಾಗಗಳ ಕೋರ್ಸ್ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿರುವ 70 ವಿದ್ಯಾರ್ಥಿಗಳು 92 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಳ್ಳಲಿದ್ದಾರೆ.</p>.<p>ಮೂವರಿಗೆ ಡಿ.ಲಿಟ್. ಪದವಿ, ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ 94 ವಿದ್ಯಾರ್ಥಿಗಳಿಗೆಪಿಎಚ್.ಡಿ. ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ. 6257ವಿದ್ಯಾರ್ಥಿಗಳು ಪದವಿ,1587 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ಶಿಕ್ಷಣ, ಸಮಾಜಸೇವೆ, ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕುಣಿಗಲ್ ತಾಲ್ಲೂಕಿನ ಸಿ.ಎನ್.ಮಂಚೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ವಿ.ವಿ.ಕುಲಪತಿ ವೈ.ಎಸ್.ಸಿದ್ದೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಂ.ಎಸ್ಸಿ. ಗಣಿತದಲ್ಲಿ ಎಚ್.ಎಸ್.ಮನೋಹರ್ 5 ಚಿನ್ನದ ಪದಕ, ಎಂ.ಕಾಂ.ನಲ್ಲಿ ಎಂ.ಸಿ.ದಿವ್ಯಾಮಣಿ 4 ಚಿನ್ನದ ಪದಕ, ಎಂ.ಎ.ಕನ್ನಡದಲ್ಲಿ ಟಿ.ಡಿ.ಲಾವಣ್ಯ ಅವರು 3 ಚಿನ್ನದ ಪದಕಗಳನ್ನು ಗಳಿಸಿದ್ದಾರೆ.</p>.<p>ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ ಅಧ್ಯಕ್ಷ ಮಣಿಕ್ ರಾವ್ ಎಂ.ಸಾಲೊಂಖೆ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>