<p>ತುರುವೇಕೆರೆ: ಪಟ್ಟಣದ ಗ್ರಾಮದೇವತೆ ಉಡುಸಲಮ್ಮ ದೇವಿ ಜಾತ್ರೆ ಅಂಗವಾಗಿ ಆಶ್ಚರ್ಯ ಸಿಡಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಪಟ್ಟಣ ಸೇರಿದಂತೆ ಅಕ್ಕಪಕ್ಕದ 12 ಗ್ರಾಮಗಳು ಸೇರಿ ಆಚರಿಸುವ ಈ ಜಾತ್ರೆಯಲ್ಲಿ ಸಿಡಿ ಉತ್ಸವ ನೋಡಲು ಸಾವಿರಾರು ಜನ ಪಾಲ್ಗೊಂಡಿದ್ದರು. ಸಿಡಿ ಕಂಬಕ್ಕೆ ಏರುವವರು ಸಿಡಿ ಹಾಡುವ ಅಗ್ನಿವಂಶಸ್ಥರಾಗಿದ್ದು ಸಿ.ಡಿ. ಪೂಜೆಗೆ ನಿಗದಿ ಪಡಿಸಿದ ದಿನದಂದು ದಿನವೆಲ್ಲ ಉಪವಾಸ ವ್ರತದಲ್ಲಿದ್ದರು.</p>.<p>ಸಿಡಿ ಕಂಬಕ್ಕೆ ಏರುವ ವ್ಯಕ್ತಿಯನ್ನು ತಮ್ಮ ಮನೆಯಿಂದ ದೇವಿಯೊಂದಿಗೆ ಮೆರವಣಿಗೆಯ ಮೂಲಕ ಉಡಸಲಮ್ಮ ದೇವಾಲಯದ ಆವರಣಕ್ಕೆ ಕರೆತಂದು ಸಿಡಿ ಕಂಬದ ಎದುರಿನ ಮಂಟಪದಲ್ಲಿ ಕೂರಿಸಿ ಉಯ್ಯಾಲೋತ್ಸವ ಮಾಡಲಾಯಿತು.</p>.<p>ನಂತರ ಸಿಡಿ ಪ್ರಾರಂಭವಾಗಲಿದ್ದು ಸಿ.ಡಿ.ಯ ಕಂಬಕ್ಕೆ ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿ ಸ್ಥಿರ ಕಂಬದ ಸುತ್ತ ತಿರುಗಿಸಲಾಗುತ್ತದೆ. ಒಬ್ಬರಾದ ಮೇಲೆ ಒಬ್ಬರಂತೆ ಸಿಡಿಯನ್ನು ಆಡುವ ಪ್ರತೀತಿ ಇದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಗುಡಿಗೌಡ ಟಿ.ಕೆ.ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-17-2129224620</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ಪಟ್ಟಣದ ಗ್ರಾಮದೇವತೆ ಉಡುಸಲಮ್ಮ ದೇವಿ ಜಾತ್ರೆ ಅಂಗವಾಗಿ ಆಶ್ಚರ್ಯ ಸಿಡಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಪಟ್ಟಣ ಸೇರಿದಂತೆ ಅಕ್ಕಪಕ್ಕದ 12 ಗ್ರಾಮಗಳು ಸೇರಿ ಆಚರಿಸುವ ಈ ಜಾತ್ರೆಯಲ್ಲಿ ಸಿಡಿ ಉತ್ಸವ ನೋಡಲು ಸಾವಿರಾರು ಜನ ಪಾಲ್ಗೊಂಡಿದ್ದರು. ಸಿಡಿ ಕಂಬಕ್ಕೆ ಏರುವವರು ಸಿಡಿ ಹಾಡುವ ಅಗ್ನಿವಂಶಸ್ಥರಾಗಿದ್ದು ಸಿ.ಡಿ. ಪೂಜೆಗೆ ನಿಗದಿ ಪಡಿಸಿದ ದಿನದಂದು ದಿನವೆಲ್ಲ ಉಪವಾಸ ವ್ರತದಲ್ಲಿದ್ದರು.</p>.<p>ಸಿಡಿ ಕಂಬಕ್ಕೆ ಏರುವ ವ್ಯಕ್ತಿಯನ್ನು ತಮ್ಮ ಮನೆಯಿಂದ ದೇವಿಯೊಂದಿಗೆ ಮೆರವಣಿಗೆಯ ಮೂಲಕ ಉಡಸಲಮ್ಮ ದೇವಾಲಯದ ಆವರಣಕ್ಕೆ ಕರೆತಂದು ಸಿಡಿ ಕಂಬದ ಎದುರಿನ ಮಂಟಪದಲ್ಲಿ ಕೂರಿಸಿ ಉಯ್ಯಾಲೋತ್ಸವ ಮಾಡಲಾಯಿತು.</p>.<p>ನಂತರ ಸಿಡಿ ಪ್ರಾರಂಭವಾಗಲಿದ್ದು ಸಿ.ಡಿ.ಯ ಕಂಬಕ್ಕೆ ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿ ಸ್ಥಿರ ಕಂಬದ ಸುತ್ತ ತಿರುಗಿಸಲಾಗುತ್ತದೆ. ಒಬ್ಬರಾದ ಮೇಲೆ ಒಬ್ಬರಂತೆ ಸಿಡಿಯನ್ನು ಆಡುವ ಪ್ರತೀತಿ ಇದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಗುಡಿಗೌಡ ಟಿ.ಕೆ.ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-17-2129224620</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>