<p><strong>ತುರುವೇಕೆರೆ</strong>: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗುರುವಾರ ಬೆಳಗ್ಗೆಯೇ ತಾಲ್ಲೂಕು ಕಚೇರಿಗೆ ಬಂದಿಳಿದ ಲೋಕಾಯುಕ್ತ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿರುವ ಕುರಿತು ತಾಲ್ಲೂಕು ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸಂಬಂಧಿಸಿದ ಭೂಮಿಗಳ ದಾಖಲೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ನರಿಗೇಹಳ್ಳಿ, ಲೆಂಕನಹಳ್ಳಿ, ದೇವನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿದ್ದ ಸರ್ಕಾರಿ ಭೂಮಿಯನ್ನು ಕೆಲವು ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಹಲವರು ಲಕ್ಷಾಂತರ ಹಣ ಪಡೆದು ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.</p>.<p>ಈ ನಕಲಿ ದಾಖಲೆಗಳನ್ನು 2018-19ರಲ್ಲಿ ಸೃಷ್ಟಿಸಲಾಗಿದೆ. 1995ರಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.</p>.<p>ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್, ಸಿಬ್ಬಂದಿ ಕಲ್ಲೇಶ್ ಮತ್ತು ತಿಪಟೂರು ಉಪವಿಭಾಗಾಧಿಕಾರಿ ಕಚೇರಿಯ ಕೆಲ ಸಿಬ್ಬಂದಿ ಮತ್ತು ತುರುವೇಕೆರೆ ಕೆಲವು ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಜಿಲ್ಲಾ ಲೋಕಾಯುಕ್ತ ಎಸ್ಪಿ ಎ.ವಿ. ಲಕ್ಷ್ಮಿನಾರಾಯಣ್, ಇನ್ಸ್ಪೆಕ್ಟರ್ ಸಲೀಂ ಅಹಮದ್ ಮತ್ತು ಸಬ್ಇನ್ಸ್ಪೆಕ್ಟರ್ ಟಿ.ರಾಜು ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗುರುವಾರ ಬೆಳಗ್ಗೆಯೇ ತಾಲ್ಲೂಕು ಕಚೇರಿಗೆ ಬಂದಿಳಿದ ಲೋಕಾಯುಕ್ತ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿರುವ ಕುರಿತು ತಾಲ್ಲೂಕು ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸಂಬಂಧಿಸಿದ ಭೂಮಿಗಳ ದಾಖಲೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ನರಿಗೇಹಳ್ಳಿ, ಲೆಂಕನಹಳ್ಳಿ, ದೇವನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿದ್ದ ಸರ್ಕಾರಿ ಭೂಮಿಯನ್ನು ಕೆಲವು ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಹಲವರು ಲಕ್ಷಾಂತರ ಹಣ ಪಡೆದು ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.</p>.<p>ಈ ನಕಲಿ ದಾಖಲೆಗಳನ್ನು 2018-19ರಲ್ಲಿ ಸೃಷ್ಟಿಸಲಾಗಿದೆ. 1995ರಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.</p>.<p>ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್, ಸಿಬ್ಬಂದಿ ಕಲ್ಲೇಶ್ ಮತ್ತು ತಿಪಟೂರು ಉಪವಿಭಾಗಾಧಿಕಾರಿ ಕಚೇರಿಯ ಕೆಲ ಸಿಬ್ಬಂದಿ ಮತ್ತು ತುರುವೇಕೆರೆ ಕೆಲವು ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಜಿಲ್ಲಾ ಲೋಕಾಯುಕ್ತ ಎಸ್ಪಿ ಎ.ವಿ. ಲಕ್ಷ್ಮಿನಾರಾಯಣ್, ಇನ್ಸ್ಪೆಕ್ಟರ್ ಸಲೀಂ ಅಹಮದ್ ಮತ್ತು ಸಬ್ಇನ್ಸ್ಪೆಕ್ಟರ್ ಟಿ.ರಾಜು ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>