<p><strong>ತುರುವೇಕೆರೆ</strong>: ತಾಲ್ಲೂಕಿನ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಕೇವಲ ಒಂದು ರಾಗಿ ಖರೀದಿ ಘಟಕವಿದೆ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆಚ್ಚುವರಿಯಾಗಿ ಎರಡು ರಾಗಿ ಖರೀದಿ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಕೆಎಪ್ಸಿಎಸ್ಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ರೈತರ ದೂರುಗಳನ್ನು ಆಲಿಸಿದರು.</p>.<p>ರಾಗಿ ಖರೀದಿ ವೇಳೆ ರೈತರಿಂದ 50 ಕೆಜಿ 600 ಗ್ರಾಂ ರಾಗಿ ಖರೀದಿಸಬೇಕು ಎಂದು ನಿಯಮವಿದೆ. ಆದರೆ ಇಲ್ಲಿಯ ಅಧಿಕಾರಿಗಳು ಸರಿ ಸುಮಾರು 52 ಕೆಜಿಯಷ್ಟು ರಾಗಿ ತೆಗೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ರೈತರಿಂದ ₹100 ರೂಪಾಯಿ ಹಮಾಲಿ ಹಣ ಎಂದು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ನಷ್ಟವಾಗುತ್ತಿದೆ ಎಂದು ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜು ಮತ್ತು ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ಜಿಲ್ಲಾಧಿಕಾರಿಗೆ ದೂರಿದರು.</p>.<p>ತೂಕದಲ್ಲಿ ಅಕ್ರಮ ಎಸಗಲಾಗುತ್ತಿದೆ ಎಂಬ ದೂರಿದ ಮೇರೆಗೆ ದಾಸ್ತಾನು ಕೊಠಡಿಗೆ ತೆರಳಿದ ಜಿಲ್ಲಾಧಿಕಾರಿ ದಾಸ್ತಾನು ಮಧ್ಯದಲ್ಲಿದ್ದ ಎರಡು ಚೀಲಗಳನ್ನು ತೂಕ ಮಾಡುವಂತೆ ಸೂಚಿಸಿದರು. ಆಗ ಒಂದು ಚೀಲ 51.600 ಕೆಜಿ ಬಂದರೆ ಮತ್ತೊಂದು 49 ಕೆಜಿ ಮಾತ್ರ ಬಂದಿತು.</p>.<p>ರಾಗಿ ಖರೀದಿ ವೇಳೆ ರೈತರೇ ತೂಕ ಮಾಡಲು ರಾಗಿಯನ್ನು ಸುರಿದರೆ ಯಾವುದೇ ಹಣ ನೀಡುವಂತಿಲ್ಲ. ಆದರೆ ಹಮಾಲಿಗಳಿಂದ ರಾಗಿ ತೂಕ ಹಾಕಿಸಿದಲ್ಲಿ ಅವರ ಕೂಲಿ ಕೊಡಬೇಕಾಗುವುದು ಅನಿವಾರ್ಯ. ಆದರೂ ₹100ಕ್ಕೆ ಬದಲಾಗಿ ಕಡಿಮೆ ಹಣ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಕುಂಇ ಅಹಮದ್, ಇಒ ಅನಂತರಾಜು, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ತನ್ವೀರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಆಹಾರ ನಿರೀಕ್ಷ ಕೃಷ್ಣೇಗೌಡ, ಹರೀಶ್, ಬಿಇಒ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ತಾಲ್ಲೂಕಿನ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಕೇವಲ ಒಂದು ರಾಗಿ ಖರೀದಿ ಘಟಕವಿದೆ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆಚ್ಚುವರಿಯಾಗಿ ಎರಡು ರಾಗಿ ಖರೀದಿ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಕೆಎಪ್ಸಿಎಸ್ಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ರೈತರ ದೂರುಗಳನ್ನು ಆಲಿಸಿದರು.</p>.<p>ರಾಗಿ ಖರೀದಿ ವೇಳೆ ರೈತರಿಂದ 50 ಕೆಜಿ 600 ಗ್ರಾಂ ರಾಗಿ ಖರೀದಿಸಬೇಕು ಎಂದು ನಿಯಮವಿದೆ. ಆದರೆ ಇಲ್ಲಿಯ ಅಧಿಕಾರಿಗಳು ಸರಿ ಸುಮಾರು 52 ಕೆಜಿಯಷ್ಟು ರಾಗಿ ತೆಗೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ರೈತರಿಂದ ₹100 ರೂಪಾಯಿ ಹಮಾಲಿ ಹಣ ಎಂದು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ನಷ್ಟವಾಗುತ್ತಿದೆ ಎಂದು ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜು ಮತ್ತು ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ಜಿಲ್ಲಾಧಿಕಾರಿಗೆ ದೂರಿದರು.</p>.<p>ತೂಕದಲ್ಲಿ ಅಕ್ರಮ ಎಸಗಲಾಗುತ್ತಿದೆ ಎಂಬ ದೂರಿದ ಮೇರೆಗೆ ದಾಸ್ತಾನು ಕೊಠಡಿಗೆ ತೆರಳಿದ ಜಿಲ್ಲಾಧಿಕಾರಿ ದಾಸ್ತಾನು ಮಧ್ಯದಲ್ಲಿದ್ದ ಎರಡು ಚೀಲಗಳನ್ನು ತೂಕ ಮಾಡುವಂತೆ ಸೂಚಿಸಿದರು. ಆಗ ಒಂದು ಚೀಲ 51.600 ಕೆಜಿ ಬಂದರೆ ಮತ್ತೊಂದು 49 ಕೆಜಿ ಮಾತ್ರ ಬಂದಿತು.</p>.<p>ರಾಗಿ ಖರೀದಿ ವೇಳೆ ರೈತರೇ ತೂಕ ಮಾಡಲು ರಾಗಿಯನ್ನು ಸುರಿದರೆ ಯಾವುದೇ ಹಣ ನೀಡುವಂತಿಲ್ಲ. ಆದರೆ ಹಮಾಲಿಗಳಿಂದ ರಾಗಿ ತೂಕ ಹಾಕಿಸಿದಲ್ಲಿ ಅವರ ಕೂಲಿ ಕೊಡಬೇಕಾಗುವುದು ಅನಿವಾರ್ಯ. ಆದರೂ ₹100ಕ್ಕೆ ಬದಲಾಗಿ ಕಡಿಮೆ ಹಣ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಕುಂಇ ಅಹಮದ್, ಇಒ ಅನಂತರಾಜು, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ತನ್ವೀರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಆಹಾರ ನಿರೀಕ್ಷ ಕೃಷ್ಣೇಗೌಡ, ಹರೀಶ್, ಬಿಇಒ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>