ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಂಶಿಕೃಷ್ಣ, ‘ಕೋವಿಡ್ ನಿಯಮ ಪಾಲಿಸಬೇಕಾಗಿರುವುದರಿಂದ ಜನರು ಗುಂಪು ಸೇರಿದೆ ಪೊಲೀಸರಿಗೆ ಕಾನೂನು ರೀತಿ ಕೆಲಸ ಮಾಡಲು ಅವಕಾಶ ನೀಡಬೇಕು. ಪ್ರಕರಣ ಕುರಿತು ತನಿಖೆ ನಡೆಸಲು ಡಿವೈಎಸ್ಪಿ ಅವರನ್ನು ತನಿಕಾಧಿಕಾರಿಯಾಗಿ ನೇಮಿಸಿದ್ದೇವೆ. ದೂರುಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.