<p><strong>ತುರುವೇಕೆರೆ:</strong> ‘ಉತ್ತಮ ಆಡಳಿತಗಾರನಾಗಿದ್ದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಅವರನ್ನು ಅವಧಿಗೂ ಮುನ್ನವೇ ಸರ್ಕಾರ ವರ್ಗಾವಣೆ ಮಾಡಿರುವುದು ಖಂಡನೀಯ’ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ನಿರ್ದೇಶಕ ಮಂಚೇನಹಳ್ಳಿ ಕೃಷ್ಣಮೂರ್ತಿ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿಗೆ ತಹಶೀಲ್ದಾರ್ ಆಗಿ ಬಂದ ನಂತರ ಉತ್ತಮ ಆಡಳಿತ ನೀಡಿದ್ದಾರೆ. ಬಡವರ, ರೈತರ ಹಲವು ಸಮಸ್ಯೆ ಬಗೆಹರಿಸಿ ಉತ್ತಮ ಆಡಳಿತಗಾರಾಗಿದ್ದರು’ ಎಂದರು.</p>.<p>‘ಕಾಡುಗೊಲ್ಲ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ಮೂಲ ಸೌಕರ್ಯ ಕುಂಠಿತಗೊಂಡಿದ್ದು, ಸರ್ಕಾರಗಳು ಗಮನ ಹರಿಸುತ್ತಿಲ್ಲ. ಆದರೆ ವೈ.ಎಂ.ರೇಣುಕುಮಾರ್ ತಹಶೀಲ್ದಾರ್ ಆಗಿ ಬಂದ ನಂತರ ತಾಲ್ಲೂಕಿನಲ್ಲಿ ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು’ ಎಂದರು.</p>.<p>ತಾಲ್ಲೂಕಿನ 56 ಗೊಲ್ಲರಹಟ್ಟಿಗಳ ಪೈಕಿ 20ಕ್ಕೂ ಹೆಚ್ಚು ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯಗಳ ಕೊರತೆ ಆಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸ್ಥಳದಲ್ಲಿಯೇ ನೀಡಿದ್ದರು. ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.</p>.<p>ಗೋಷ್ಠಿಯಲ್ಲಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಜಿ.ಶೇಖರಯ್ಯ, ತಾಲ್ಲೂಕು ಅಲೆಮಾರಿ ಸಮಿತಿ ಸದಸ್ಯ ಆಶೋಕ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಕಾಡುಗೊಲ್ಲ ಯುವಸೇನೆ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಕೆ.ಎಂ.ಜಯರಾಮ್, ಆರ್.ರಮೇಶ್, ಕೃಷ್ಣಮೂರ್ತಿ, ವೇಣು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ‘ಉತ್ತಮ ಆಡಳಿತಗಾರನಾಗಿದ್ದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಅವರನ್ನು ಅವಧಿಗೂ ಮುನ್ನವೇ ಸರ್ಕಾರ ವರ್ಗಾವಣೆ ಮಾಡಿರುವುದು ಖಂಡನೀಯ’ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ನಿರ್ದೇಶಕ ಮಂಚೇನಹಳ್ಳಿ ಕೃಷ್ಣಮೂರ್ತಿ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿಗೆ ತಹಶೀಲ್ದಾರ್ ಆಗಿ ಬಂದ ನಂತರ ಉತ್ತಮ ಆಡಳಿತ ನೀಡಿದ್ದಾರೆ. ಬಡವರ, ರೈತರ ಹಲವು ಸಮಸ್ಯೆ ಬಗೆಹರಿಸಿ ಉತ್ತಮ ಆಡಳಿತಗಾರಾಗಿದ್ದರು’ ಎಂದರು.</p>.<p>‘ಕಾಡುಗೊಲ್ಲ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ಮೂಲ ಸೌಕರ್ಯ ಕುಂಠಿತಗೊಂಡಿದ್ದು, ಸರ್ಕಾರಗಳು ಗಮನ ಹರಿಸುತ್ತಿಲ್ಲ. ಆದರೆ ವೈ.ಎಂ.ರೇಣುಕುಮಾರ್ ತಹಶೀಲ್ದಾರ್ ಆಗಿ ಬಂದ ನಂತರ ತಾಲ್ಲೂಕಿನಲ್ಲಿ ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು’ ಎಂದರು.</p>.<p>ತಾಲ್ಲೂಕಿನ 56 ಗೊಲ್ಲರಹಟ್ಟಿಗಳ ಪೈಕಿ 20ಕ್ಕೂ ಹೆಚ್ಚು ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯಗಳ ಕೊರತೆ ಆಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸ್ಥಳದಲ್ಲಿಯೇ ನೀಡಿದ್ದರು. ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.</p>.<p>ಗೋಷ್ಠಿಯಲ್ಲಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಜಿ.ಶೇಖರಯ್ಯ, ತಾಲ್ಲೂಕು ಅಲೆಮಾರಿ ಸಮಿತಿ ಸದಸ್ಯ ಆಶೋಕ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಕಾಡುಗೊಲ್ಲ ಯುವಸೇನೆ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಕೆ.ಎಂ.ಜಯರಾಮ್, ಆರ್.ರಮೇಶ್, ಕೃಷ್ಣಮೂರ್ತಿ, ವೇಣು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>