<p><strong>ತುರುವೇಕೆರೆ</strong>: ತಾಲ್ಲೂಕು ಕಸಾಪದಿಂದ ಸೆಪ್ಟೆಂಬರ್ 22ರಂದು ನಡೆಯುವ 6ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಸಂಪಿಗೆ ತೋಂಟದಾರ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.</p>.<p>ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆದ ಸಮ್ಮೇಳನ ಅಧ್ಯಕ್ಷರ ಆಯ್ಕೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಸಮ್ಮೇಳನ ನಡೆಸಲು ಎಲ್ಲ ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಾಹಿತ್ಯಾಸಕ್ತರ ತೀರ್ಮಾನದಂತೆ ಕಾರ್ಯಕ್ರಮದ ರೂಪುರೇಷೆ ಮಾಡಲಾಗಿದೆ. ಶಾಸಕ ಎಂ.ಟಿ.ಕೃಷ್ಣಪ್ಪ ಸಮ್ಮೇಳನಕ್ಕೆ ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಸಮ್ಮೇಳನವನ್ನು ವೈಟಿ ರಸ್ತೆಯಲ್ಲಿನ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಸಮ್ಮೇಳನದ ಉದ್ಘಾಟನೆಯನ್ನು ಸಾಹಿತಿ ಬರಗೂರು ರಾಮಚಂದ್ರಪ್ಪ ನೆರವೇರಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರ ಮಗ ಬಾಬು ಹಿರಣ್ಣಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಸ್ಮರಣ ಸಂಚಿಕೆಗೆ ತಾಲ್ಲೂಕಿನ ಯುವ ಸಾಹಿತಿಗಳು, ನಾಗರಿಕರು ತಾಲ್ಲೂಕಿಗೆ ವಿಶೇಷ ಲೇಖನಗಳನ್ನು ಆಗಸ್ಟ್ 25ರೊಳಗೆ ಕಳುಹಿಸಿಕೊಡಬೇಕು. ಲೇಖನಗಳ ಆಯ್ಕೆ ಸಂಪಾದಕ ಮಂಡಳಿಯದ್ದಾಗಿರುತ್ತದೆ ಎಂದರು.</p>.<p>ಕಸಾಪ ಗೌರವಾಧ್ಯಕ್ಷ ಟಿ.ಎಸ್.ಬೋರೇಗೌಡ, ಕಾರ್ಯದರ್ಶಿ ದಿನೇಶ್, ಮಾಯಸಂದ್ರ ಹೋಬಳಿ ಅಧ್ಯಕ್ಷ ಮುನಿರಾಜು, ಪದಾಧಿಕಾರಿಗಳಾದ ಮಂಜೇಗೌಡ, ಕೆಂಪರಾಜು, ಪರಮೇಶ್ವರ ಸ್ವಾಮಿ, ಷಣ್ಮುಖಪ್ಪ, ಆನಂದಜಲ, ನಂಜೇಗೌಡ, ರಾಘವೇಂದ್ರ, ಬಸವರಾಜು, ಶಿವರಾದ್ಯ, ಲೋಕೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ತಾಲ್ಲೂಕು ಕಸಾಪದಿಂದ ಸೆಪ್ಟೆಂಬರ್ 22ರಂದು ನಡೆಯುವ 6ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಸಂಪಿಗೆ ತೋಂಟದಾರ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.</p>.<p>ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆದ ಸಮ್ಮೇಳನ ಅಧ್ಯಕ್ಷರ ಆಯ್ಕೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ಸಮ್ಮೇಳನ ನಡೆಸಲು ಎಲ್ಲ ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಾಹಿತ್ಯಾಸಕ್ತರ ತೀರ್ಮಾನದಂತೆ ಕಾರ್ಯಕ್ರಮದ ರೂಪುರೇಷೆ ಮಾಡಲಾಗಿದೆ. ಶಾಸಕ ಎಂ.ಟಿ.ಕೃಷ್ಣಪ್ಪ ಸಮ್ಮೇಳನಕ್ಕೆ ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಸಮ್ಮೇಳನವನ್ನು ವೈಟಿ ರಸ್ತೆಯಲ್ಲಿನ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಸಮ್ಮೇಳನದ ಉದ್ಘಾಟನೆಯನ್ನು ಸಾಹಿತಿ ಬರಗೂರು ರಾಮಚಂದ್ರಪ್ಪ ನೆರವೇರಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರ ಮಗ ಬಾಬು ಹಿರಣ್ಣಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಸ್ಮರಣ ಸಂಚಿಕೆಗೆ ತಾಲ್ಲೂಕಿನ ಯುವ ಸಾಹಿತಿಗಳು, ನಾಗರಿಕರು ತಾಲ್ಲೂಕಿಗೆ ವಿಶೇಷ ಲೇಖನಗಳನ್ನು ಆಗಸ್ಟ್ 25ರೊಳಗೆ ಕಳುಹಿಸಿಕೊಡಬೇಕು. ಲೇಖನಗಳ ಆಯ್ಕೆ ಸಂಪಾದಕ ಮಂಡಳಿಯದ್ದಾಗಿರುತ್ತದೆ ಎಂದರು.</p>.<p>ಕಸಾಪ ಗೌರವಾಧ್ಯಕ್ಷ ಟಿ.ಎಸ್.ಬೋರೇಗೌಡ, ಕಾರ್ಯದರ್ಶಿ ದಿನೇಶ್, ಮಾಯಸಂದ್ರ ಹೋಬಳಿ ಅಧ್ಯಕ್ಷ ಮುನಿರಾಜು, ಪದಾಧಿಕಾರಿಗಳಾದ ಮಂಜೇಗೌಡ, ಕೆಂಪರಾಜು, ಪರಮೇಶ್ವರ ಸ್ವಾಮಿ, ಷಣ್ಮುಖಪ್ಪ, ಆನಂದಜಲ, ನಂಜೇಗೌಡ, ರಾಘವೇಂದ್ರ, ಬಸವರಾಜು, ಶಿವರಾದ್ಯ, ಲೋಕೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>