<p><strong>ತುರುವೇಕೆರೆ</strong>: ರಾಜ್ಯದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ರಾಜ್ಯಸರ್ಕಾರ ಕೇವಲ ₹100 ಕೋಟಿ ಮೀಸಲಿಟ್ಟಿರುವುದನ್ನು ಖಂಡಿಸಿ ಏಪ್ರಿಲ್ 21 ಮತ್ತು 22ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಹೊಣಕೆರೆ ಕೃಷ್ಣಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸುಮಾರು 46 ಜಾತಿಗಳನ್ನು ಹೊಂದಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯವನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದರು.</p>.<p>ಪದಾಧಿಕಾರಿಗಳು: ತಾಲ್ಲೂಕು ಉಪಾಧ್ಯಕ್ಷರಾಗಿ ನೆಮ್ಮದಿಗ್ರಾಮ ರಂಗಸ್ವಾಮಿ, ಅಕ್ಕಳಸಂದ್ರ ಗೊಲ್ಲರಹಟ್ಟಿ ಪ್ರಕಾಶ್, ಸಂಘಟನಾ ಕಾರ್ಯದರ್ಶಿಗಳಾಗಿ ಸಾದರಹಳ್ಳಿ ಸ್ವಾಮೀಜಿ ಮತ್ತು ಥರಮನಕೋಟೆಯ ತಿಮ್ಮೇಗೌಡ ಅವರನ್ನು ನೇಮಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಗ್ರಪ್ಪ, ಜಿಲ್ಲಾ ಉಪಾಧ್ಯಕ್ಷ ಥರಮನಕೋಟೆ ರಾಜು, ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ ಹರಿದಾಸನಹಳ್ಳಿಯ ಮಂಜಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾಚೇನಹಳ್ಳಿ ಸತೀಶ್ ಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ರಾಜ್ಯದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ರಾಜ್ಯಸರ್ಕಾರ ಕೇವಲ ₹100 ಕೋಟಿ ಮೀಸಲಿಟ್ಟಿರುವುದನ್ನು ಖಂಡಿಸಿ ಏಪ್ರಿಲ್ 21 ಮತ್ತು 22ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಹೊಣಕೆರೆ ಕೃಷ್ಣಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸುಮಾರು 46 ಜಾತಿಗಳನ್ನು ಹೊಂದಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯವನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದರು.</p>.<p>ಪದಾಧಿಕಾರಿಗಳು: ತಾಲ್ಲೂಕು ಉಪಾಧ್ಯಕ್ಷರಾಗಿ ನೆಮ್ಮದಿಗ್ರಾಮ ರಂಗಸ್ವಾಮಿ, ಅಕ್ಕಳಸಂದ್ರ ಗೊಲ್ಲರಹಟ್ಟಿ ಪ್ರಕಾಶ್, ಸಂಘಟನಾ ಕಾರ್ಯದರ್ಶಿಗಳಾಗಿ ಸಾದರಹಳ್ಳಿ ಸ್ವಾಮೀಜಿ ಮತ್ತು ಥರಮನಕೋಟೆಯ ತಿಮ್ಮೇಗೌಡ ಅವರನ್ನು ನೇಮಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಗ್ರಪ್ಪ, ಜಿಲ್ಲಾ ಉಪಾಧ್ಯಕ್ಷ ಥರಮನಕೋಟೆ ರಾಜು, ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ ಹರಿದಾಸನಹಳ್ಳಿಯ ಮಂಜಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾಚೇನಹಳ್ಳಿ ಸತೀಶ್ ಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>