<p>ತುರುವೇಕೆರೆ: ರಸಗೊಬ್ಬರ ಉತ್ಪಾದಕರು ವ್ಯಾಪಾರಸ್ಥರಿಗೆ ಲಿಂಕ್ ಪ್ರಾಡಕ್ಟ್ಗಳನ್ನು ಕಡ್ಡಾಯಗೊಳಿಸಬಾರದು ಎಂದು ಆಗ್ರಹಿಸಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಶಿರಸ್ತೆದಾರ್ ಡಿ.ಆರ್.ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ತಾಲ್ಲೂಕು ಮಾರಾಟಗಾರರ ಸಂಘದ ಅಧ್ಯಕ್ಷ ರಂಗನಾಥ್ ಮಾತನಾಡಿ, ಸಾಗಾಣಿಕೆ ಮತ್ತು ಸರಕುಗಳ ವೆಚ್ಚ ಭರಿಸಬೇಕು. ರಸಗೊಬ್ಬರಗಳ ಮೇಲಿನ ಗರಿಷ್ಠ ಮೊತ್ತಕ್ಕೆ ಕನಿಷ್ಠ ಶೇಕಡ 8ರಷ್ಟು ಲಾಭಾಂಶ ನೀಡಬೇಕು. ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳಿಗೆ ಕನಿಷ್ಠ ₹50 ಲಾಭಾಂಶ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಸಗೊಬ್ಬರದ ಚೀಲಗಳನ್ನು ಭದ್ರಪಡಿಸಬೇಕು. ಈಗ ಜಾರಿಗೆ ತಂದಿರುವ ಎಫ್ಐಡಿ ವ್ಯವಸ್ಥೆ ಜಾರಿಗೊಳಿಸಲು ಸಮಯಾವಕಾಶ ನೀಡಬೇಕು ಎಂದರು.</p>.<p>ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಶಮನ ಮಾಡಬೇಕು. ರಸಗೊಬ್ಬರ ಮಾರಾಟ ದರ ಕಡಿಮೆಯಾದಲ್ಲಿ ಗೊಬ್ಬರ ತಯಾರಿಕಾ ಕಂಪನಿ ಮಾರಾಟಗಾರರಿಗೆ ಆಗುವ ನಷ್ಟ ಭರಿಸಬೇಕು ಎಂದು ಆಗ್ರಹಿಸಿದರು.</p>.<p>ಕೃಷಿ ಇಲಾಖಾ ಸಹಾಯಕ ನಿರ್ದೇಶಕಿ ಬಿ.ಪೂಜಾ ಮನವಿ ಪತ್ರ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ರಂಗನಾಥ್, ಉಪಾಧ್ಯಕ್ಷ ಬಸವರಾಜು, ಖಜಾಂಚಿ ಜವರೇಗೌಡ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-17-1047914941</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ರಸಗೊಬ್ಬರ ಉತ್ಪಾದಕರು ವ್ಯಾಪಾರಸ್ಥರಿಗೆ ಲಿಂಕ್ ಪ್ರಾಡಕ್ಟ್ಗಳನ್ನು ಕಡ್ಡಾಯಗೊಳಿಸಬಾರದು ಎಂದು ಆಗ್ರಹಿಸಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಶಿರಸ್ತೆದಾರ್ ಡಿ.ಆರ್.ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ತಾಲ್ಲೂಕು ಮಾರಾಟಗಾರರ ಸಂಘದ ಅಧ್ಯಕ್ಷ ರಂಗನಾಥ್ ಮಾತನಾಡಿ, ಸಾಗಾಣಿಕೆ ಮತ್ತು ಸರಕುಗಳ ವೆಚ್ಚ ಭರಿಸಬೇಕು. ರಸಗೊಬ್ಬರಗಳ ಮೇಲಿನ ಗರಿಷ್ಠ ಮೊತ್ತಕ್ಕೆ ಕನಿಷ್ಠ ಶೇಕಡ 8ರಷ್ಟು ಲಾಭಾಂಶ ನೀಡಬೇಕು. ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳಿಗೆ ಕನಿಷ್ಠ ₹50 ಲಾಭಾಂಶ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಸಗೊಬ್ಬರದ ಚೀಲಗಳನ್ನು ಭದ್ರಪಡಿಸಬೇಕು. ಈಗ ಜಾರಿಗೆ ತಂದಿರುವ ಎಫ್ಐಡಿ ವ್ಯವಸ್ಥೆ ಜಾರಿಗೊಳಿಸಲು ಸಮಯಾವಕಾಶ ನೀಡಬೇಕು ಎಂದರು.</p>.<p>ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಶಮನ ಮಾಡಬೇಕು. ರಸಗೊಬ್ಬರ ಮಾರಾಟ ದರ ಕಡಿಮೆಯಾದಲ್ಲಿ ಗೊಬ್ಬರ ತಯಾರಿಕಾ ಕಂಪನಿ ಮಾರಾಟಗಾರರಿಗೆ ಆಗುವ ನಷ್ಟ ಭರಿಸಬೇಕು ಎಂದು ಆಗ್ರಹಿಸಿದರು.</p>.<p>ಕೃಷಿ ಇಲಾಖಾ ಸಹಾಯಕ ನಿರ್ದೇಶಕಿ ಬಿ.ಪೂಜಾ ಮನವಿ ಪತ್ರ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ರಂಗನಾಥ್, ಉಪಾಧ್ಯಕ್ಷ ಬಸವರಾಜು, ಖಜಾಂಚಿ ಜವರೇಗೌಡ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-17-1047914941</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>