ತಿಪಟೂರು: ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಕೆಸರಿನಲ್ಲಿ ಸಿಲುಕಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬೊಮ್ಮಲಾಪುರದಲ್ಲಿ ಭಾನುವಾರ ನಡೆದಿದೆ.
ಬೊಮ್ಮಲಾಪುರದ ಪ್ರಸನ್ನ ಕುಮಾರ್ ಅವರ ತೋಟದಲ್ಲಿನ ಕೃಷಿ ಹೊಂಡಕ್ಕೆ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ನಿವಾಸಿ ರಮೇಶ್ ಅವರ ಮಕ್ಕಳಾದ ರಾಮಚಂದ್ರ (14), ಯಶವಂತ್ (12) ಶಾಲೆಗೆ ರಜೆ ಇದ್ದ ಕಾರಣ ಈಜಾಡಲು ಹೋಗಿದ್ದರು. ಕೆಸರು ಇದ್ದ ಕಾರಣಕ್ಕೆ ಕೆಸರಿಗೆ ಸಿಲುಕಿ ಮೃತಪಟ್ಟಿದ್ದಾರೆ.