ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರು ಸಾವು

Last Updated 11 ಅಕ್ಟೋಬರ್ 2021, 2:13 IST
ಅಕ್ಷರ ಗಾತ್ರ

ತಿಪಟೂರು: ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಕೆಸರಿನಲ್ಲಿ ಸಿಲುಕಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬೊಮ್ಮಲಾಪುರದಲ್ಲಿ ಭಾನುವಾರ ನಡೆದಿದೆ.

ಬೊಮ್ಮಲಾಪುರದ ಪ್ರಸನ್ನ ಕುಮಾರ್ ಅವರ ತೋಟದಲ್ಲಿನ ಕೃಷಿ ಹೊಂಡಕ್ಕೆ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ನಿವಾಸಿ
ರಮೇಶ್ ಅವರ ಮಕ್ಕಳಾದ ರಾಮಚಂದ್ರ (14), ಯಶವಂತ್ (12) ಶಾಲೆಗೆ ರಜೆ ಇದ್ದ ಕಾರಣ
ಈಜಾಡಲು ಹೋಗಿದ್ದರು. ಕೆಸರು ಇದ್ದ ಕಾರಣಕ್ಕೆ ಕೆಸರಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT