ಜಿಲ್ಲಾ ಅಪರಾಧ ಪತ್ತೆ ದಳದ ಸರ್ಕಲ್ ಇನ್ಸ್ಪೆಕ್ಟರ್ ಶೇಷಾದ್ರಿ, ಗುಬ್ಬಿ ಠಾಣೆ ಹಿಂದಿನ ಇನ್ಸ್ಪೆಕ್ಟರ್ ರಾಮಕೃಷ್ಣ, ಸಬ್ಇನ್ಸ್ಪೆಕ್ಟರ್ ಜ್ಞಾನಮೂರ್ತಿ ಅವರು ಸಹ ದಂಧೆ ನಡೆಸಲು ಪರೋಕ್ಷವಾಗಿ ಕಾರಣಕರ್ತರಾಗಿದ್ದಾರೆ. ದಾಳಿ ನಡೆಸಿದ ಸಮಯದಲ್ಲಿ ವಶಪಡಿಸಿಕೊಂಡ ಹಣ, ವಸ್ತುಗಳ ವಿವರಗಳನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಹಾಗಾಗಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ವರದಿ ಸಲ್ಲಿಸಿದ್ದರು. ಆದರೆ ಅವರ ವಿರುದ್ಧ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.