ಅಲ್ಲದೇ, ಜಿಲ್ಲಾ ಪೊಲೀಸ್ ಕಚೇರಿಯ ಪತ್ತೆ ದಳದಿಂದ ಮಾಹಿತಿ ಸಂಗ್ರಹಿಸಿ ಜಿಲ್ಲೆಯ ಯಾವುದೇ ಮೂಲೆಯಲ್ಲಿ ಅಕ್ರಮ ಜೂಜಾಟ, ಮಟಕಾ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗುವುದು. ಆಯಾ ಠಾಣಾ ಎಸ್.ಬಿ. ಸಿಬ್ಬಂದಿ ಹಾಗೂ ಠಾಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.