ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಪ್ರತ್ಯೇಕ ಅಪಘಾತ ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

Last Updated 27 ನವೆಂಬರ್ 2022, 6:13 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ವ್ಯಾಪ್ತಿಯಲ್ಲಿ ಭಾನುವಾರ ಬೆಳಗಿನ ಜಾವ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಚಿಕ್ಕಮಳಲವಾಡಿ ಗ್ರಾಮದ ಬಳಿ ನಾಯಿ ಅಡ್ಡ ಬಂದಿದ್ದು, ಬೈಕ್ ಆಯತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಂಗಯ್ಯನಪಾಳ್ಯದ ಧನಂಜಯ (30) ಮೃತಪಟ್ಟಿದ್ದಾರೆ.

ತಾಲ್ಲೂಕಿ‌ನ ಅಂಚೆಪಾಳ್ಯದ ಹತ್ತಿರ ರಸ್ತೆಯ ಉಬ್ಬು ದಾಟುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನರಸಿಂಹ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಸೇರಿದಂತೆ ಸಹ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿಯ ಚಿಕ್ಕಣ್ಣಸ್ವಾಮಿ ದೇವಾಲಯಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT