ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿಗೆ ಸರಕು ಸಾಗಣೆ ವಾಹನ ಡಿಕ್ಕಿ: ಇಬ್ಬರು ಸಾವು

Published 5 ಫೆಬ್ರುವರಿ 2024, 11:29 IST
Last Updated 5 ಫೆಬ್ರುವರಿ 2024, 11:29 IST
ಅಕ್ಷರ ಗಾತ್ರ

ಕುಣಿಗಲ್: ಕಾರಿಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಿದನಗೆರೆ ಬೈಪಾಸ್ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಚನ್ನರಾಯಪಟ್ಟಣ ತಾಲ್ಲೂಕು ಗುಳೇನಹಳ್ಳಿ ಅಣ್ಣೆಗೌಡ (36),

ಕಾರಿನ ಚಾಲಕ ಬೆಂಗಳೂರಿನ ನಿರಂಜನ (25) ಎಂದು ಗುರುತಿಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗುಳೆನಹಳ್ಳಿಯ ಪುಟ್ಟೇಗೌಡ ಗಾಯಗೊಂಡಿದ್ದಾರೆ.

ಕಾರು ಚನ್ನರಾಯಪಟ್ಟಣದಿಂದ ಬೆಂಗಳೂರಿನ ಕಡೆ ಹೋಗುತ್ತಿದ್ದು, ಬೆಂಗಳೂರಿನ ಕಡೆಯಿಂದ ಬಂದ ಸರಕುಸಾಗಣೆ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT