ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಪ್ರತ್ಯೇಕ ಅಪಘಾತ: ಇಬ್ಬರು ಸಾವು

Last Updated 15 ಜುಲೈ 2022, 4:19 IST
ಅಕ್ಷರ ಗಾತ್ರ

ತುಮಕೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ತುರುವೇಕೆರೆ ತಾಲ್ಲೂಕಿನ ಕೊಂಡ್ಲಿಕ್ರಾಸ್ ನಿಂದ ಅಮ್ಮಸಂದ್ರ ಕಡೆಗೆ ಹೋಗುವಾಗ ಅಶೋಕ ರೋಡ್ ಫ್ಲಾಂಟ್ ಹತ್ತಿರ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಬಿ.ರಾಜ ಮೃತಪಟ್ಟಿದ್ದಾರೆ.

ರಾಜ ತುರುವೇಕೆರೆ ತಾಲ್ಲೂಕಿ‌ನ ಅಮ್ಮಸಂದ್ರದಲ್ಲಿ ವಾಸವಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.

ನಗರದ ಬಟವಾಡಿಯ ಬಳಿ ಗುರುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಹೊಡೆದು 25 ವರ್ಷದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT