ತುಮಕೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ತುರುವೇಕೆರೆ ತಾಲ್ಲೂಕಿನ ಕೊಂಡ್ಲಿಕ್ರಾಸ್ ನಿಂದ ಅಮ್ಮಸಂದ್ರ ಕಡೆಗೆ ಹೋಗುವಾಗ ಅಶೋಕ ರೋಡ್ ಫ್ಲಾಂಟ್ ಹತ್ತಿರ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಬಿ.ರಾಜ ಮೃತಪಟ್ಟಿದ್ದಾರೆ.
ರಾಜ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದಲ್ಲಿ ವಾಸವಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.
ನಗರದ ಬಟವಾಡಿಯ ಬಳಿ ಗುರುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಹೊಡೆದು 25 ವರ್ಷದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪದ್ದಾರೆ.