ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತಿಬ್ಬರು ಗಡಿಪಾರು: ಮದ್ಯ ವಶ

Published 8 ಏಪ್ರಿಲ್ 2024, 4:35 IST
Last Updated 8 ಏಪ್ರಿಲ್ 2024, 4:35 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ, ಕಾನೂನು ಸುವ್ಯವಸ್ಥೆ ಹಾಳು ಮಾಡುವಂತಹ ಹಿನ್ನೆಲೆಯುಳ್ಳ ಇಬ್ಬರನ್ನು ಗಡಿಪಾರು ಮಾಡಲಾಗಿದೆ.

ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಎಸ್‌.ಎಂ.ನವೀನ್‌ಕುಮಾರ್‌ (35), ಕುಣಿಗಲ್‌ ತಾಲ್ಲೂಕಿನ ಹೊಸೂರಿನ ಗಿರೀಶ್‌ ಗಡಿಪಾರಾದವರು.

ಮದ್ಯ ವಶ: ಪಾವಗಡ ತಾಲ್ಲೂಕಿನ ದೊಮ್ಮತಮರಿ ಗ್ರಾಮದ ಬಳಿ ಶನಿವಾರ ಅಕ್ರಮವಾಗಿ ಸಾಗಿಸುತ್ತಿದ್ದ ₹2 ಲಕ್ಷ ಮೌಲ್ಯದ 400 ಲೀಟರ್‌ ಸೇಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬೊಲೆರೊ ವಾಹನದಲ್ಲಿ 4 ಡ್ರಮ್‌ಗಳಲ್ಲಿ ಸೇಂದಿ ಸಾಗಿಸುತ್ತಿದ್ದರು. ಆರೋಪಿ ರಾಮಾಂಜಿನೇಯಲು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಜಂಕ್ಷನ್‌ ಬಳಿ ಡಿ.ರಂಗನಾಥ ಎಂಬುವರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹18 ಸಾವಿರ ಮೌಲ್ಯದ ಮದ್ಯದ ಟೆಟ್ರಾ ಪ್ಯಾಕೆಟ್ ಅನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT