ಸಿದ್ಧರಬೆಟ್ಟದಲ್ಲಿ ಮದುವೆಗೆ ಬಂದಿದ್ದ ಮೂವರು ಒಂದೇ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಮಹೇಶ್ ಹಾಗೂ ಚೆನ್ನಿಗಯ್ಯ ಮೃತಪಟ್ಟಿದ್ದಾರೆ. ಭರತ್ ಎಂಬುವರು ಗಾಯಗೊಂಡಿದ್ದು ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಒಂದೇ ಬೈಕ್ನಲ್ಲಿ ಬರುತ್ತಿದ್ದರು. ಎಲ್ಲರೂ ಮಧುಗಿರಿ ತಾಲ್ಲೂಕಿನ ಗರಣಿ ಗ್ರಾಮದವರು.