ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕುಪ್ಪೂರು ಬಳಿ ಭಾನುವಾರ ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಳಿಯ ಕಾಕನೂರು ಗ್ರಾಮದ ನಮನ (12) ಮತ್ತು ಪ್ರೇಮಮ್ಮ (40) ಮೃತರು.
ತಮ್ಮ ಮನೆದೇವರಾದ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಭೈರವೇಶ್ವರನ ಜಾತ್ರೆಗೆ ಟಾಟಾ ಏಸ್ ವಾಹನದಲ್ಲಿ ಹೋಗಿತ್ತಿದ್ದರು. ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ತಮ್ಮ ಸಂಬಂಧಿಕರೊಬ್ಬರನ್ನು ಕರೆದುಕೊಂಡು ಹೋಗುವಾಗ ಕುಪ್ಪೂರಿನ ಬಳಿ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿಯಾಗಿ ರಸ್ತೆಗೆ ಉರುಳಿದೆ.
ಅಪಘಾತದಲ್ಲಿ ಗಾಯಗೊಂಡವರು ಜಿಲ್ಲಾ ಆಸ್ಪತ್ರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.