<p><strong>ತುಮಕೂರು</strong>: ನಗರದ ದಿಬ್ಬೂರು ಬಳಿಯ ವಿದೇಶಿ ಮಹಿಳೆಯರ ಬಂಧನ ಕೇಂದ್ರದಿಂದ ಶನಿವಾರ ರಾತ್ರಿ ಬಾಂಗ್ಲಾದೇಶದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡಿದ್ದಾರೆ.</p>.<p>ರೇಷ್ಮಾ (45), ಲಿಜಾ ಶೈಕಾ (25) ಪರಾರಿಯಾದ ಮಹಿಳೆಯರು. ವೀಸಾ ಅವಧಿ ಮುಗಿದ ಕಾರಣ ಎರಡು ತಿಂಗಳ ಹಿಂದೆ ಇವರನ್ನು ಕೇಂದ್ರಕ್ಕೆ ಕರೆ ತರಲಾಗಿತ್ತು.</p>.<p>‘ಮಹಿಳೆಯರು ವಾಸವಿದ್ದ ಕೋಣೆಯಲ್ಲಿ ಪರಿಶೀಲನೆ ನಡೆಸಿದಾಗ ಚಾವಣಿಯಿಂದ ಹಾರಿ ತಪ್ಪಿಸಿಕೊಂಡು ಹೋಗಿದ್ದಾರೆ’ ಎಂದು ಕೇಂದ್ರದ ಕಾರ್ಯದರ್ಶಿ ಜಿ.ಬಿ.ಮಾರೆಪ್ಪ ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<p>ವೀಸಾ ಅವಧಿ ಮುಗಿದವರು ಮತ್ತು ಅಕ್ರಮವಾಗಿ ದೇಶದೊಳಗೆ ನುಸುಳಿದ 21 ವಿದೇಶಿ ಮಹಿಳೆಯರು ಸದ್ಯ ಈ ಕೇಂದ್ರದಲ್ಲಿದ್ದಾರೆ.</p>.<p>‘ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೇಗೆ ತಪ್ಪಿಸಿಕೊಂಡರು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ತವ್ಯದಲ್ಲಿದ್ದ ಸಿಬ್ಬಂದಿ, ವಾರ್ಡನ್, ಕಾರ್ಯದರ್ಶಿ ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆಯ ನಂತರವೇ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದ ದಿಬ್ಬೂರು ಬಳಿಯ ವಿದೇಶಿ ಮಹಿಳೆಯರ ಬಂಧನ ಕೇಂದ್ರದಿಂದ ಶನಿವಾರ ರಾತ್ರಿ ಬಾಂಗ್ಲಾದೇಶದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡಿದ್ದಾರೆ.</p>.<p>ರೇಷ್ಮಾ (45), ಲಿಜಾ ಶೈಕಾ (25) ಪರಾರಿಯಾದ ಮಹಿಳೆಯರು. ವೀಸಾ ಅವಧಿ ಮುಗಿದ ಕಾರಣ ಎರಡು ತಿಂಗಳ ಹಿಂದೆ ಇವರನ್ನು ಕೇಂದ್ರಕ್ಕೆ ಕರೆ ತರಲಾಗಿತ್ತು.</p>.<p>‘ಮಹಿಳೆಯರು ವಾಸವಿದ್ದ ಕೋಣೆಯಲ್ಲಿ ಪರಿಶೀಲನೆ ನಡೆಸಿದಾಗ ಚಾವಣಿಯಿಂದ ಹಾರಿ ತಪ್ಪಿಸಿಕೊಂಡು ಹೋಗಿದ್ದಾರೆ’ ಎಂದು ಕೇಂದ್ರದ ಕಾರ್ಯದರ್ಶಿ ಜಿ.ಬಿ.ಮಾರೆಪ್ಪ ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<p>ವೀಸಾ ಅವಧಿ ಮುಗಿದವರು ಮತ್ತು ಅಕ್ರಮವಾಗಿ ದೇಶದೊಳಗೆ ನುಸುಳಿದ 21 ವಿದೇಶಿ ಮಹಿಳೆಯರು ಸದ್ಯ ಈ ಕೇಂದ್ರದಲ್ಲಿದ್ದಾರೆ.</p>.<p>‘ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೇಗೆ ತಪ್ಪಿಸಿಕೊಂಡರು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ತವ್ಯದಲ್ಲಿದ್ದ ಸಿಬ್ಬಂದಿ, ವಾರ್ಡನ್, ಕಾರ್ಯದರ್ಶಿ ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆಯ ನಂತರವೇ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>