ರಾಜ್ಯ ಹೆದ್ದಾರಿಯ ತಿರುವಿನಲ್ಲಿ ನಡೆದ ಅಪಘಾತದ ರಭಸಕ್ಕೆ ಎರಡು ಕಾರುಗಳ ಗಾಜುಗಳು ಪುಡಿಪುಡಿ ಆಗಿವೆ. ವಾಹನಗಳ ಅತಿವೇಗ, ಚಾಲಕರ ಅಜಾಗರೂಕತೆ ಚಾಲನೆಯಿಂದ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.