ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದು ಎರಡೂವರೆ ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಕುಣಿಗಲ್ ತಾಲ್ಲೂಕಿನ ನಾಗೇಗೌಡನಪಾಳ್ಯದ ಬಳಿ ಸಂಭವಿಸಿದೆ.
ಸಮರ್ಥ ಮೃತ ಮಗು. ಕುಣಿಗಲ್ ತಾಲ್ಲೂಕಿನ ನಾರಸಂದ್ರ ಗ್ರಾಮದ ಪರಮೇಶ್ವರ ಮತ್ತು ರಮ್ಯಶ್ರೀ ದಂಪತಿ ತಮ್ಮ ಕಾರಿನಲ್ಲಿ ಎಡೆಯೂರು ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿಕೊಂಡು ಹಿಂತಿರುಗುವಾಗ ಅಪಘಾತ ನಡೆದಿದೆ. ದಂಪತಿ ಗಾಯಗೊಂಡಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.