ಕರ್ನಾಟಕದ ಕರಾವಳಿ ತೀರ, ಹಂಪಿ, ಸೋಮನಾಥಪುರ, ಬೇಲೂರು, ಹಳೇಬೀಡುನಂತಹ ಭವ್ಯ ಕಲೆ ಪ್ರಕೃತಿ ಸಂಪತ್ತು ನಮ್ಮಲ್ಲಿ ಇರುವಾಗ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಂಡ, ಜೂಜುಕೇಂದ್ರವೇ ಬೇಕೇ ಎಂದು ಪ್ರಶ್ನಿಸಿದರು. ಸರ್ಕಾರ ಇದೇ ರೀತಿ ಮುಂದುವರಿದರೆ ಜನ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಎಚ್ಚರಿಸಿದರು.