ನಿವೇಶನಕ್ಕಾಗಿ ಹೋರಾಡಿದ ಆಶಾ, ತಹಶೀಲ್ದಾರ್ ಅವರೊಂದಿಗೆ ವಾಗ್ವಾದ ನಡೆಸಿ, ‘ಈ ಭಾಗದಲ್ಲಿ ಹತ್ತಾರು ವರ್ಷಗಳಿಂದ ಕೂಲಿ ಕಾರ್ಮಿಕರು ನಿವೇಶನಕ್ಕಾಗಿ ಸಂಬಂದಪಟ್ಟವರಿಗೆ ಮನವಿ ಮಾಡಿ, ಅನೇಕ ಹೋರಾಟಗಳನ್ನು ಲಂಚ ಮುಕ್ತಾ ವೇದಿಕೆಯ ಅಧ್ಯಕ್ಷರಾದ ರಮೇಶ್ ನೇತೃತ್ವದಲ್ಲಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಪುರಸಭೆ ಸದಸ್ಯ ರಾಮು, ಮುಖ್ಯಾಧಿಕಾರಿಗಳು ಸ್ಪಂದಿಸದ ಕಾರಣ ವಿಧಿ ಇಲ್ಲದೆ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ.ಎಲ್ಲರೂ ಅರ್ಹರಾಗಿರುವ ಕಾರಣ ನಿವೇಶನಗಳನ್ನು ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.