ಅಂತರ್ಜಲದ ದುರ್ಬಳಕೆ ತಪ್ಪಿಸಲು ಸರ್ಕಾರ 45 ತಾಲ್ಲೂಕುಗಳನ್ನು ಆಯ್ಕೆ ಮಾಡಿದೆ. ಆದರೆ, ಸತತ ಬರಪೀಡಿತ ಪ್ರದೇಶಗಳಾದ ಪಾವಗಡ ಮತ್ತು ಶಿರಾ ತಾಲ್ಲೂಕನ್ನು ಕೈ ಬಿಟ್ಟಿರುವುದು ಸರಿಯಲ್ಲ. ತಾಲ್ಲೂಕಿನಲ್ಲಿ ಅಂತರ್ಜಲಮಟ್ಟ ಕುಸಿದಿದೆ. 1200 ಅಡಿವರೆಗೆ ಕೊಳವೆಬಾವಿ ಕೊರೆದರೂ ನೀರು ಸಿಗುವುದು ಕಷ್ಟವಾಗಿದೆ. ಜನ- ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಪರಿಸ್ಥಿತಿ ಈ ರೀತಿ ಇರಬೇಕಾದರೆ ಶಿರಾ ಹಾಗೂ ಪಾವಗಡ ತಾಲ್ಲೂಕನ್ನು ಯಾವ ಮಾನದಂಡದ ಮೇಲೆ ಕೈಬಿಡಲಾಗಿದೆ ಎನ್ನುವ ಪ್ರಶ್ನೆ ಮೂಡುತ್ತಿದೆ ಎಂದಿದ್ದಾರೆ.