ಕೇಂದ್ರ ಸರ್ಕಾರ ಉನ್ನತ ಶಿಕ್ಷಣದಲ್ಲಿ ಏಕರೂಪದ ಪಠ್ಯಕ್ರಮ ಅಳವಡಿಕೆಗೆ ಮುಂದಾಗಿರುವುದು ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಕುತ್ತು ಬರಲಿದೆ. ವಿ.ವಿ.ಗಳಲ್ಲಿರುವ ಪ್ರಾಧ್ಯಾಪಕರು, ಶಿಕ್ಷಣ ತಜ್ಞರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದಂತಾಗುತ್ತದೆ. ವಿ.ವಿ.ಗಳ ವೈವಿಧ್ಯತೆ, ಉನ್ನತ ಶಿಕ್ಷಣದ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ. ಮುಂದೆ ಒಂದು ದೇಶ, ಒಂದು ಪಠ್ಯಕ್ರಮ, ಒಂದು ಪರೀಕ್ಷಾ ವಿಧಾನ ಎಂದಾದರೆ ಗ್ರಾಮೀಣ ಪ್ರದೇಶದ ಕೋಟ್ಯಂತರ ಬಡ ವಿದ್ಯಾರ್ಥಿ ಸಮುದಾಯ ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತವಾಗಲಿದೆ ಎಂದು ಎಚ್ಚರಿಸಿದ್ದಾರೆ.